ಕುಶಾಲನಗರ:ಶಾಲೆಯ ಗೇಟ್ ಬಿದ್ದು ನಾಲ್ಕು ವರ್ಷದ ಬಾಲಕಿ ದುರ್ಮರಣ
ಮಡಿಕೇರಿ: ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಬಸವನಹಳ್ಳಿ ಹಾಡಿಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಮನೆಯ ಸಮೀಪ ಇರುವ ಗಿರಿಜನ ಆಶ್ರಮ ಶಾಲೆಯಲ್ಲಿ ವ್ಯಾಸಂಗ ಮಾಡುವ ತನ್ನ ಅಕ್ಕನನ್ನು ಕರೆದೊಯ್ಯಲು ಬಾಲಕಿ ಪ್ರತಿ ದಿನ ಗೇಟ್ ಬಳಿ ಬರುವುದು ವಾಡಿಕೆ ಎನ್ನಲಾಗಿದೆ.
ಈ ಸಂದರ್ಭ ಬೃಹತ್ ಕಬ್ಬಿಣದ ಗೇಟ್ ಹಾಗೂ ಕಾಂಪೌಂಡ್ ಕಳಚಿ ಬಿದ್ದು ಬಾಲಕಿ ತಲೆ ಮೇಲೆ ಬಿದ್ದ ಪರಿಣಾಮ ಬಾಲಕಿ ಸ್ಥಳದಲ್ಲೇ ಸಾವನಪ್ಪಿದ್ದಾಳೆ ಎನ್ನಲಾಗಿದೆ. ಈಕೆ ಸತೀಶ್ ಮತ್ತು ಪವಿತ್ರ ದಂಪತಿಯ ಪುತ್ರಿಯಾಗಿದ್ದು, ಈ ದುರ್ಘಟನೆ ಕುಟುಂಬವನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ.
What's Your Reaction?
Like
0
Dislike
0
Love
0
Funny
0
Angry
0
Sad
5
Wow
0
