ಕುಶಾಲನಗರ : 12 ದಿನಗಳ ಹಿಂದೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು
ಕುಶಾಲನಗರ ಜು.23: ಕಳೆದ 12 ದಿನಗಳ ಹಿಂದೆ ಕೊಪ್ಪದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಕೂಡ್ಲೂರು ವೀರಭೂಮಿ ವೃತ್ತದ ಸಮೀಪ ವಾಸವಿದ್ದ ಕುಮಾರ್ (45) ಇಂದು ಸಂಜೆ ಮೃತಪಟ್ಟಿದ್ದಾರೆ. ಮೈಸೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆದು ಕೆಲ ದಿನಗಳ ಹಿಂದೆ ಮನೆಗೆ ಮರಳಿದ್ದರು. ಮೃತರು ಪತ್ನಿಯನ್ನು ಅಗಲಿದ್ದಾರೆ. ಮೃತದೇಹ ಮರಣೋತ್ತರ ಪರೀಕ್ಷೆಗಾಗಿ ಕುಶಾಲನಗರ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
What's Your Reaction?
Like
1
Dislike
0
Love
0
Funny
0
Angry
0
Sad
1
Wow
0
