ಕುಶಾಲನಗರ: ಪೊಲೀಸ್ ಪೇದೆಯ ಪುತ್ರ ಆತ್ಮಹತ್ಯೆಗೆ ಶರಣು
admincoorgdaily

ಕುಶಾಲನಗರ, ಜು.19 : ಚಿಕ್ಕಮಗಳೂರಿನ ಪಾಲಿಟೆಕ್ನಿಕ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಮೃತ ವಿದ್ಯಾರ್ಥಿ ರಾಕೇಶ್ ಇಂದು ಸಂಜೆ ಸ್ವಗೃಹದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಮುಖ್ಯಪೇದೆಯಾಗಿರುವ ಉಮೇಶ್ ಎಂಬುವರ ಪುತ್ರ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿರುವುದಿಲ್ಲ.