ಸಾಹಿತಿ ಅನಂತ ರಾಜೇಗೌಡ ಹೃದಯಾಘಾತದಿಂದ ನಿಧನ
ಮಡಿಕೇರಿ;ಸಾಹಿತಿ ಅನಂತ ರಾಜೇಗೌಡ ಹೃದಯಾಘಾತದಿಂದ ನಿಧನರಾಗಿದ್ದಾರೆ. ಗೌಡ ಸಮುದಾಯದ ಪ್ರಮುಖ ವ್ಯಕ್ತಿಯಾಗಿದ್ದ ಅನಂತ ರಾಜೇ ಗೌಡ ( 81) ಮಡಿಕೇರಿಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅರೆಭಾಷೆ ಗೌಡ ಸಮುದಾಯದ ಬಗ್ಗೆ ಅಪಾರ ತಿಳುವಳಿಕೆ ಹೊಂದಿದ್ದರು. ಅನೇಕ ಕೃತಿಗಳನ್ನು ರಚಿಸಿದ್ದರು. ಇತ್ತೀಚೆಗೆ ಅರೆಭಾಷೆ ಸಾಹಿತ್ಯ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಯನ್ನೂ ಪಡೆದಿದ್ದರು.