ಸಿ.ಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಶಾಸಕ .ಎಎಸ್ ಪೊನ್ನಣ್ಣ ರಾಜೀನಾಮೆ
ಬೆಂಗಳೂರು:03 ವರ್ಷಗಳಿಂದ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜೀನಾಮೆ ಅಂಗೀಕಾರಗೊಂಡಿದೆ.
ಸರಕಾರದ ಅಧೀನ ಕಾರ್ಯದರ್ಶಿ ರಾಜೀನಾಮೆ ಅಂಗೀಕಾರದ ಕುರಿತು ಅಧಿಸೂಚನೆ ಹೊರಡಿಸಿದ್ದಾರೆ. ಕಳೆದ ಮೂರು ವರ್ಷಗಳ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರರಾಗಿ ಅತ್ಯಂತ ಯಶಸ್ವಿಯಾಗಿ ನಿಭಾಯಿಸಿ ಎಎಸ್ ಪೊನ್ನಣ್ಣ ಅವರು ಹೈಕಮಾಂಡ್ ಮಟ್ಟದಲ್ಲಿ ಪ್ರಭಾವಿಯಾಗಿ ಬೆಳೆದಿದ್ದಾರೆ.ಇದೀಗ ಸಚಿವ ಸಂಪುಟ ಎರಡನೇ ಹಂತದ ವಿಸ್ತರಣೆಯಲ್ಲಿ ಸಚಿವ ಸ್ಥಾನ ಸಿಗುವ ವಿಶ್ವಾಸದಲ್ಲಿದ್ದಾರೆ.

