ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಪ್ರಮುಖರೊಂದಿಗೆ ಸಭೆ ನಡೆಸಿದ ಶಾಸಕ ಎ.ಎಸ್ ಪೊನ್ನಣ್ಣ
ವಿರಾಜಪೇಟೆ: ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರ ವಿರಾಜಪೇಟೆ ಗೃಹ ಕಚೇರಿಯಲ್ಲಿ, ಪೊನ್ನಂಪೇಟೆ ಬ್ಲಾಕ್ ಪ್ರಮುಖರ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಮಾನ್ಯ ಮಾನ್ಯ ಜಿಲ್ಲಾಧ್ಯಕ್ಷರಾದ ಧರ್ಮಜ ಉತ್ತಪ್ಪ ವಹಿಸಿದರು.
ಸಭೆಯಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೀದೇರಿರ ನವೀನ್, ವಲಯ ಅಧ್ಯಕ್ಷರುಗಳು, ಕೆಪಿಸಿಸಿ/ಡಿಸಿಸಿ ಪದಾಧಿಕಾರಿಗಳು, ಮುಂಚೂಣಿ ಘಟಕದ ಅಧ್ಯಕ್ಷರುಗಳು ಪದಾಧಿಕಾರಿಗಳು ಹಾಗೂ ಪ್ರಮುಖರು ಭಾಗವಹಿಸಿದರು. ಬೂತ್, ವಲಯ ಹಾಗೂ ಬ್ಲಾಕ್ ಮಟ್ಟದಲ್ಲಿ ಪಕ್ಷ ಸಂಘಟನೆ ಹಾಗೂ ಮುಂಬರುವ ಹಲವು ಪ್ರಮುಖ ಚುನಾವಣೆಗಳ ಪೂರ್ವ ತಯಾರಿ ಬಗ್ಗೆ ಈ ಸಭೆಯಲ್ಲಿ ಗಂಭೀರವಾಗಿ ಚರ್ಚೆ ನಡೆಯಿತು.
ಶಾಸಕರು ಸಂಘಟನೆಯ ಕುರಿತು ವಿಶೇಷ ಆಸಕ್ತಿ ವಹಿಸುವಂತೆ ಕರೆ ನೀಡಿದರಲ್ಲದೇ, ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಯನ್ನು ಶತ ಪ್ರತಿಶತ ನಿಭಾಯಿಸಲೇಬೇಕೆಂದು ಸೂಚಿಸಿದರು. ಅಗತ್ಯ ಬೀಳುವ ಕಡೆ ಬದಲಾವಣೆಯನ್ನು ಮಾಡಿ, ಸೈದ್ಧಂತಿಕವಾಗಿ ಬಲವರ್ಧನೆ ಗೊಳ್ಳುತ್ತಾ, ಸಮರೋಪಾದಿಯಲ್ಲಿ ಪಕ್ಷ ಸಂಘಟನೆಯಲ್ಲಿ ಎಲ್ಲರೂ ತೊಡಗಿಕೊಳ್ಳಬೇಕೆಂದು ಕರೆ ನೀಡಿದರು. ಇದೇ ಸಂದರ್ಭದಲ್ಲಿ ರೋನಿ ರವರು ಶಾಸಕರ ಕಾರ್ಯವೈಖರಿಯನ್ನು ಮೆಚ್ಚಿ ಬಿಜೆಪಿ ಪಕ್ಷದ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಇಂದು ಸೇರ್ಪಡೆಗೊಂಡರು.
ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಕಾಳಿಮಾಡ ಪ್ರಶಾಂತ್, ತಾಲೂಕು ಬಗರ್ ಹುಕುಂ ಅಧ್ಯಕ್ಷರು ಅಣ್ಣಳಮಾಡ ಲಾಲಾ ಅಪ್ಪಣ್ಣ, ಹಿರಿಯರಾದ ಮುಕಳೇರ ಕುಶಾಲಪ್ಪ, ಎ ಜೆ ಬಾಬು,ಪಕ್ಷದ ಪ್ರಮುಖರು ಪೃಥ್ವಿ, ಮಣಿಕಂಠ, ಪಂಕಜ, ಜುನೈದ್, ಭಾರತೀ, ಅಜಿತ್ ಅಯ್ಯಪ್ಪ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರು ಜಮ್ಮಡ ಸೋಮಣ್ಣ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.
