ಸಂಜೀವಿನಿ ಒಕ್ಕೂಟ ಹಾಗೂ ಕಲಿಕಾ ಕೇಂದ್ರ ನಿರ್ಮಾಣಕ್ಕೆ ರೂ 25ಲಕ್ಷ ಅನುದಾನದಲ್ಲಿ ಚಾಲನೆ ನೀಡಿದ ಶಾಸಕ ಎಎಸ್ ಪೊನ್ನಣ್ಣ

ಸಂಜೀವಿನಿ ಒಕ್ಕೂಟ ಹಾಗೂ ಕಲಿಕಾ ಕೇಂದ್ರ ನಿರ್ಮಾಣಕ್ಕೆ ರೂ 25ಲಕ್ಷ ಅನುದಾನದಲ್ಲಿ ಚಾಲನೆ ನೀಡಿದ ಶಾಸಕ ಎಎಸ್ ಪೊನ್ನಣ್ಣ

ವಿರಾಜಪೇಟೆ: ಸಂಜೀವಿನಿ ಒಕ್ಕೂಟ ಹಾಗೂ ಕಲಿಕಾ ಕೇಂದ್ರ ನಿರ್ಮಾಣಕ್ಕೆ ರೂ 25ಲಕ್ಷ ಅನುದಾನದಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಚಾಲನೆ ನೀಡಿದರು.

ನರಿಯಂದಡ ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆದ ಈ ಕಾರ್ಯಕ್ರಮದ ಬಳಿಕ ಶುಭ ಕೋರಿದ ಶಾಸಕರು, ಇತ್ತೀಚೆಗಿನ ದಿನಗಳಲ್ಲಿ ಸಂಜೀವಿನಿ ಒಕ್ಕೂಟಗಳು ಹಲವಾರು ಸಾಮಾಜಿಕ ಕಾರ್ಯಕ್ರಮಗಳಲ್ಲಿ ಸರ್ಕಾರದೊಂದಿಗೆ ಕೈಜೋಡಿಸುತ್ತಿದೆ. ಆಡಳಿತ ವ್ಯವಸ್ಥೆಯಲ್ಲಿಯೂ ಸಹ ಸಂಜೀವಿನಿ ಒಕ್ಕೂಟಗಳು ಅತ್ಯಂತ ಪ್ರಬಲವಾಗಿ ಮೂಡಿಬಂದಿದ್ದು ಇದರಿಂದಾಗಿ ಸಮಾಜಕ್ಕೆ ಒಳಿತಾಗುತ್ತಿದೆ ಎಂದು ಬಣ್ಣಿಸಿದರು. ವಿಶೇಷವಾಗಿ ಮಹಿಳೆಯರಿಗೆ ಪ್ರಾತಿನಿಧ್ಯ ದೊರಕುತ್ತಿದ್ದು, ಸಮಾಜದ ಮುನ್ನೆಲೆಗೆ ಮಹಿಳೆಯರು ಬಂದು, ಸಮಾನವಾಗಿ ಬದುಕಲು ಇದು ಅವಕಾಶ ಕಲ್ಪಿಸಿದೆ ಎಂದು ಬಣ್ಣಿಸಿದರು.

 ಸಂಜೀವಿನಿ ಒಕ್ಕೂಟಗಳು ಮತ್ತಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಮಾಜದ ಏಳಿಗೆಗೆ ಶ್ರಮಿಸಬೇಕೆಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರು ಬೊಳ್ಳಂಡ ಶರಿನ್, ನಾಪೋಕ್ಲು ಬ್ಲಾಕ್ ಅಧ್ಯಕ್ಷರು ಇಸ್ಮಾಯಿಲ್, ನರಿಯಂದಡ ಗ್ರಾಮ ಅಧ್ಯಕ್ಷರು ಕೌಶಿಕ್ ಕಾವೇರಮ್ಮ, ಉಪಾಧ್ಯಕ್ಷರು ಹಾಗೂ ವಲಯ ಅಧ್ಯಕ್ಷರಾದ ಕೋಡಿರ ವಿನೋದ್ ನಾಣಯ್ಯ, ಶೈಲಾ ಕುಟ್ಟಪ್ಪ, ವಾಣಿ, ಪ್ರಕಾಶ್, ಸುಬೀರ್, ಮಮ್ಮಾದ್, ಹಾಗೂ ಪಕ್ಷದ ಪ್ರಮುಖರು, ಸ್ಥಳೀಯರು ಉಪಸ್ಥಿತರಿದ್ದರು.