ಮಾಪಿಳೆತೋಡುವಿನಿಂದ ಹುದಿಕೇರಿಗೆ ತೆರಳುವ ರಸ್ತೆ ಅಭಿವೃದ್ಧಿಗೆ ಶಾಸಕ ಎಎಸ್ ಪೊನ್ನಣ್ಣ ಚಾಲನೆ
ಪೊನ್ನಂಪೇಟೆ:ತಾಲೂಕಿನ ಮಾಪಿಳೆತೋಡು ಭಾಗಕ್ಕೆ, ಇಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣನವರು ಭೇಟಿ ನೀಡಿದರು. ಮಾಪಿಳೆತೋಡುವಿನಿಂದ ಹುದಿಕೇರಿಗೆ ತೆರಳುವ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ ನೆರವೇರಿಸಿದ ಮಾನ್ಯ ಶಾಸಕರು, ಸುಮಾರು ₹ 2ಕೋಟಿ 80ಲಕ್ಷದಲ್ಲಿ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷರು ಮಿದೇರಿರ ನವೀನ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಕಾಳಿಮಾಡ ಪ್ರಶಾಂತ್, ತಾಲೂಕು ಪ್ರಚಾರ ಸಮಿತಿಯ ಅಧ್ಯಕ್ಷರು ಟಾಟು ಮೊಣ್ಣಪ್ಪ, ವಲಯ ಅಧ್ಯಕ್ಷರು ಚಂಗುಲಂಡ ಸೂರಜ್, ಹಿರಿಯರು ಮುಕಳೇರ ಕುಶಾಲಪ್ಪ, ತಿತೀರ ಮಂದಣ್ಣ, ಸಾದಲಿ, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರು ಮಲ್ಲಂಡ ಧ್ಯಾನ್ ದೇವಯ್ಯ, ಕೊಣ್ಣಿಯಂಡ ಸೋಮಣ್ಣ, ಪಕ್ಷದ ಮುಖಂಡರು ಮಚ್ಚಾಮಾಡ ಮನು, ಅಣ್ಣಳ್ಳಮಾಡ ಹರೀಶ್, ರವಿ, ಗಿರೀಶ್, ಅಜ್ಜಿಕುಟ್ಟಿರ ಪೊನ್ನಪ್ಪ, ಅಜ್ಜಿಕುಟ್ಟಿರ ಗಿರೀಶ್, ಕೇಚಮಾಡ ಸಿದ್ದು ನಾಚಪ್ಪ, ಕುಂಡಚ್ಚಿರ ಮಂಜು ದೇವಯ್ಯ, ತಾಣಚ್ಚಿರ ನಿಖಿಲ್ ಸೋಮಣ್ಣ, ಮದನ್ ಮಂದಣ್ಣ, ರೀಕ್ಷಿತ್ ಕಾರ್ಯಪ್ಪ, ಬಿಪಿನ್, ವಚನ್ ನಾಚಪ್ಪ, ಪ್ರಮುಖರು ಉಪಸ್ಥಿತರಿದ್ದರು.

