ಆನೆ ಹಾವಳಿ ತಡೆಗಟ್ಟಲು 28ಲಕ್ಷ ವೆಚ್ಚದಲ್ಲಿ ಹ್ಯಾಂಗಿಂಗ್ ಸೋಲಾರ್ ಪೆನ್ಸಿಂಗ್ ಕಾಮಗಾರಿಗೆ ಶಾಸಕ‌‌ ಎಎಸ್ ಪೊನ್ನಣ್ಣ ಚಾಲನೆ

May 13, 2026 - 20:01
 0  367
ಆನೆ ಹಾವಳಿ ತಡೆಗಟ್ಟಲು  28ಲಕ್ಷ ವೆಚ್ಚದಲ್ಲಿ ಹ್ಯಾಂಗಿಂಗ್ ಸೋಲಾರ್ ಪೆನ್ಸಿಂಗ್ ಕಾಮಗಾರಿಗೆ ಶಾಸಕ‌‌ ಎಎಸ್ ಪೊನ್ನಣ್ಣ ಚಾಲನೆ

ವಿರಾಜಪೇಟೆ;ಕ್ಷೇತ್ರದ ಜನತೆಯನ್ನು ದಶಕಗಳಿಂದ ಕಾಡುತ್ತಿರುವ ಆನೆ-ಮಾನವ ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ, ಈಗಾಗಲೇ ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಹಲವಾರು ಪ್ರಮುಖ ನಿರ್ಣಯಗಳನ್ನು ಕೈಗೊಂಡು, ಕ್ಷೇತ್ರಾದ್ಯಂತ ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದ್ದಾರೆ.

    ಅದರ ಭಾಗವಾಗಿ ಇಂದು ವಿರಾಜಪೇಟೆ ತಾಲೂಕು ಪಾಲಂಗಾಲ ಗ್ರಾಮಕ್ಕೆ ಆಗಮಿಸಿದ ಮಾನ್ಯ ಶಾಸಕರು, ಈ ಭಾಗದಲ್ಲಿ ಅರಣ್ಯ ಇಲಾಖೆ ವತಿಯಿಂದ ಆನೆ ಹಾವಳಿ ತಡೆಗಟ್ಟಲು ರೂ 28ಲಕ್ಷ ವೆಚ್ಚದಲ್ಲಿ ನಿರ್ಮಾಣ ಆಗುತ್ತಿರುವ ಹ್ಯಾಂಗಿಂಗ್ ಸೋಲಾರ್ ಪೆನ್ಸಿಂಗ್ ಕಾಮಗಾರಿಗೆ ಚಾಲನೆ ನೀಡಿದರಲ್ಲದೆ, ಈಗಾಗಲೇ ಈ ಸಂಬಂಧ ನಡೆಯುತ್ತಿರುವ ಕಾಮಗಾರಿಯ ವೀಕ್ಷಣೆ ಹಾಗೂ ಅಧಿಕಾರಿಗಳಿಂದ ಇದರ ಬಗ್ಗೆ ಸಂಪೂರ್ಣ ವಿವರಣೆಗಳನ್ನು ಪಡೆದರು. ಇದೇ ಸಂದರ್ಭದಲ್ಲಿ ಅರಣ್ಯ ಇಲಾಖೆ ವತಿಯಿಂದ ಅರಣ್ಯ ಗಂಚಿನಲ್ಲಿ ವಾಸಿಸುತ್ತಿರುವ ಮಹಿಳೆಯರು ಸ್ವಾವಲಂಬಿ ಆಗಲು ನೀಡುವ ಹೊಲಿಗೆ ಯಂತ್ರ ಹಾಗೂ ಇತರ ಸೌಲತ್ತುಗಳನ್ನು ಶಾಸಕರು ವಿತರಿಸಿದರು.

   ಬಳಿಕ ಮಾತನಾಡಿದ ಮಾನ್ಯ ಶಾಸಕರು, ತನ್ನ ಕೋರಿಕೆ ಹಾಗೂ ಪ್ರಯತ್ನದ ಮೇರೆಗೆ, ಕರ್ನಾಟಕ ರಾಜ್ಯ ಸರಕಾರದ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿವರು ಈಗಾಗಲೇ ಮಾನವ-ಪ್ರಾಣಿ ಸಂಘರ್ಷ ತಡೆಗಟ್ಟುವ ಸಲುವಾಗಿ ನೂರಾರು ಕೋಟಿ ಅನುದಾನವನ್ನು ಒದಗಿಸಿದ್ದು, ಕ್ಷೇತ್ರಾದ್ಯಂತ ತೀವ್ರತೆಗೆ ಅನುಸಾರವಾಗಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಇದರಲ್ಲಿ ಸೋಲಾರ್ ಫೆನ್ಸಿಂಗ್, ಸೋಲಾರ್ ಹ್ಯಾಂಗಿಂಗ್ ಸೆನ್ಸಿಂಗ್, ರೈಲ್ವೆ ಬ್ಯಾರಿಕೇಡ್ ಅಳವಡಿಕೆ, ಆನೆ ಕಂದಕ ನಿರ್ಮಾಣ, ಅರಣ್ಯ ಇಲಾಖೆಯವರಿಗೆ ನೂತನ ಹಾಗೂ ಆಧುನಿಕ ಪ್ಯಾಟ್ರೋಲಿನ್ ವಾಹನಗಳು, ಅರಣ್ಯ ಇಲಾಖೆಗೆ ಹೆಚ್ಚಿನ ಅನುಭವಿ ಹಾಗೂ ತರಬೇತಿ ಪಡೆದಿರುವ ಸಿಬ್ಬಂದಿಗಳು ಮಾತ್ರವಲ್ಲದೆ ಇನ್ನೂ ಹಲವು ಸೌಲಭ್ಯಗಳನ್ನು ಕಲ್ಪಿಸಿದೆ. ಅರಣ್ಯ ಇಲಾಖೆಯೊಂದಿಗೆ ಸಾರ್ವಜನಿಕರು ಜಾಗೃತ್ಯವಹಿಸಿಕೊಂಡು, ಅರಣ್ಯ ಅಂಚಿನಲ್ಲಿರುವ ನಿವಾಸಿಗಳು ವಿಶೇಷ ಜಾಗೃತಿಯಿಂದ ತಮ್ಮ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕೆಂದು ಸಲಹೆ ನೀಡಿದರು. ಅರಣ್ಯ ಅಧಿಕಾರಿಗಳು ಸಹ ಜನರೊಂದಿಗೆ ಸ್ನೇಹದಿಂದ ವರ್ತಿಸಿ, ಜನರೊಂದಿಗೆ ಉತ್ತಮ ಒಡನಾಟ ಇರಿಸಿಕೊಂಡಲ್ಲಿ ಇಂತಹ ಸಂಘರ್ಷಗಳನ್ನು ತಡೆಗಟ್ಟುವುದು ಮತ್ತಷ್ಟು ಸುಲಭವಾಗಲಿದೆ ಎಂದು ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ವಲಯ ಅಧ್ಯಕ್ಷರು ನಡಿಕೇರಿಯಂಡ ಮಹೇಶ್,ಕೆಡಿಪಿ ಸದಸ್ಯರು ಪ್ರಶಾಂತ್,ತಾಲೂಕು ಅಲ್ಪಸಂಖ್ಯಾತರ ಅಧ್ಯಕ್ಷರು ರಫೀಕ್,ಬೂತ್ ಅಧ್ಯಕ್ಷರು ವಿಜಯ್ ಕುಮಾರ್, ಮಾಜಿ ಅಧ್ಯಕ್ಷರು ಜೆಫ್ರೀ ಉತ್ತಪ್ಪ, ಇಸ್ಮಾಯಿಲ್, ಆಲಿ, ಮಳೇಟೀರ ಶುಭ ಸುಬ್ಬಯ್ಯ, ಪಕ್ಷದ ಮುಖಂಡರು ಬಾಚಮಾಂಡ ಲವ ಚಿಣ್ಣಪ್ಪ,ಕಲಿಯಂಡ ಸಂಪನ್ ಅಯ್ಯಪ್ಪ, ಸೂರಜ್ ಹೊಸೂರು, ಕುಂಡಚ್ಚಿರ ಮಂಜು ದೇವಯ್ಯ, ಜಿತನ್, ಧ್ಯಾನಿ, ಪಾಲಂಗಾಲ ಬೂತ್ ಅಧ್ಯಕ್ಷರು ಜಾಲು ಚೆಂಗಪ್ಪ,ಮಿಟ್ಟು ಅಯ್ಯಪ್ಪ, ಹರಿದಾಸ್, ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0