ಕೃಷಿ ಸಚಿವರಾದ ಚಲುವರಾಯಸ್ವಾಮಿ ಅವರನ್ನು ಭೇಟಿಯಾದ ಶಾಸಕ ಎಎಸ್ ಪೊನ್ನಣ್ಣ

ಕೃಷಿ ಸಚಿವರಾದ ಚಲುವರಾಯಸ್ವಾಮಿ ಅವರನ್ನು ಭೇಟಿಯಾದ ಶಾಸಕ ಎಎಸ್ ಪೊನ್ನಣ್ಣ

ಬೆಂಗಳೂರು:ಕರ್ನಾಟಕ ಬರಪೀಡಿತ ಜಿಲ್ಲೆಗಳಲ್ಲಿ, ಪರ ಮತ್ತು ಉಷ್ಣತಾಳುವ ಮೆಕ್ಕೆಜೋಳ ಮತ್ತು ಸುಧಾರಿತ ಕೃಷಿ ಪದ್ಧತಿಗಳ ವಿಸ್ತರಣೆ ಕುರಿತು ಮಾನ್ಯ ಕೃಷಿ ಸಚಿವರಾದ ಚೆಲುವರಾಯಸ್ವಾಮಿ ಅವರನ್ನು, ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಹಾಗೂ ತಜ್ಞರ ತಂಡ ಸಚಿವರ ಕಚೇರಿಯಲ್ಲಿ ಭೇಟಿ ಮಾಡಿ ಚರ್ಚಿಸಿದರು. ಇದೇ ಸಂದರ್ಭದಲ್ಲಿ ಮಾನ್ಯ ಸಚಿವರೊಂದಿಗೆ ಕ್ಷೇತ್ರಕ್ಕೆ ಸಂಬಂಧಿಸಿದ ಇತರ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.