ಪಾಲಿಬೆಟ್ಟ ಉರೂಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಎಎಸ್ ಪೊನ್ನಣ್ಣ

ಪಾಲಿಬೆಟ್ಟ ಉರೂಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಎಎಸ್ ಪೊನ್ನಣ್ಣ

ಸಿದ್ದಾಪುರ; ಇತಿಹಾಸ ಪ್ರಸಿದ್ಧ ಪಾಲಿಬೆಟ್ಟ ಉರೂಸ್ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ತಿತೀರ ಧರ್ಮಜ ಉತ್ತಪ್ಪ, ವಲಯ ಅಧ್ಯಕ್ಷರು ಸಾಬು ಕಾಳಪ್ಪ, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರು ಹನೀಫ್, ಪುರಸಭೆ ನಿಕಟಪೂರ್ವ ಸದಸ್ಯರಾದ ರಾಫಿ, ಮಸೀದಿಯ ಅಧ್ಯಕ್ಷರು, ಸದಸ್ಯರು, ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.