ಶಾಂತಳ್ಳಿ ಶ್ರೀ ಕ್ಷೇತ್ರ ಕುಮಾರಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ ಶಾಸಕ ಎಎಸ್ ಪೊನ್ನಣ್ಣ
ಸೋಮವಾರಪೇಟೆ ;ತಾಲೂಕಿನ ಶಾಂತಳ್ಳಿಯಲ್ಲಿ ಜರುಗಿದ ಶ್ರೀ ಕ್ಷೇತ್ರ ಕುಮಾರಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು. ಸ್ಥಳೀಯ ಭಕ್ತಾಭಿಮಾನಿಗಳ ಆಹ್ವಾನದ ಮೇರೆಗೆ ತೆರಳಿದ ಶಾಸಕರು, ಶ್ರೀ ಕ್ಷೇತ್ರದಲ್ಲಿ ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮಡಿಕೇರಿ ಶಾಸಕರಾದ ಮಂತರ್ ಗೌಡ, ಸಂಸದರಾದ ಯುದುವೀರ್ ಒಡೆಯರ್, ಮಾಜಿ ಶಾಸಕರಾದ ಅಪ್ಪಚ್ಚು ರಂಜನ್ ಇದ್ದರು.