ಮಾನಂದವಾಡಿ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಎಎಸ್ ಪೊನ್ನಣ್ಣ ಬಿರುಸಿನ ಚುನಾವಣಾ ಪ್ರಚಾರ
ವಯನಾಡು;ಕೇರಳ ರಾಜ್ಯದ ಚುನಾವಣೆಯ ಮಾನಂದವಾಡಿ ವಿಧಾನಸಭಾ ಕ್ಷೇತ್ರದ ತೂಂಡರ್ ನಾಡ್ ಪಂಚಾಯಿತಿ ವ್ಯಾಪ್ತಿಯಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಚುನಾವಣೆ ರೂಪುರೇಷೆ ಬಗ್ಗೆ ಸ್ಥಳೀಯ ಮುಖಂಡರೊಂದಿಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಕೊಡಗಿನಿಂದ ಬಂದ ಮಹಿಳಾ ಘಟದ ಅಧ್ಯಕ್ಷರು, ಸದಸ್ಯರು, ಹಾಗೂ ಪ್ರಮುಖರು ಉಪಸ್ಥಿತರಿದ್ದರು.