ಮಡಿಕೇರಿ ನಗರಸಭಾ ವ್ಯಾಪ್ತಿಯಲ್ಲಿ ಯುಜಿಡಿ ಕೇಬಲ್ ವ್ಯವಸ್ಥೆ ಶೀಘ್ರವೇ ಕಲ್ಪಿಸುವಂತೆ ಸದನದಲ್ಲಿ ಆಗ್ರಹಿಸಿದ ಶಾಸಕ ಡಾ.ಮಂತರ್ ಗೌಡ
ಮಡಿಕೇರಿ;ನಗರಸಭೆ ವ್ಯಾಪ್ತಿಯಲ್ಲಿ ಮಳೆಹಾನಿಯಿಂದಾಗಿ ವಿದ್ಯುತ್ ಸಂಪರ್ಕದಲ್ಲಿ ಅನಾನುಕೂಲಗಳಾಗುತ್ತಿರುವ ಬಗ್ಗೆ ಸದನದಲ್ಲಿ ಮಾತನಾಡಿದ ಶಾಸಕ ಡಾ.ಮಂತರ್ ಗೌಡ ರವರು ಯುಜಿಡಿ ಕೇಬಲ್ ವ್ಯವಸ್ಥೆ ಶೀಘ್ರವೇ ಕಲ್ಪಿಸಿ ಮಳೆಗಾಲದಲ್ಲಿ ಆಗುತ್ತಿರುವ ಸಮಸ್ಯೆಗಳಿಗೆ ಮುಕ್ತಿ ನೀಡುವಂತೆ ಇಂಧನ ಸಚಿವರ ಗಮನ ಸೆಳೆದರು.
ಹಾಗೂ ಅಮೃತ್ 2 ನೀರಿನ ವ್ಯವಸ್ಥೆ ಕಾಮಗಾರಿಯ ಜೊತೆ ಜೊತೆಗೆ ಯುಜಿಡಿ ಕೇಬಲ್ ಅಳವಡಿಕೆಗೆ ವ್ಯವಸ್ಥೆ ಕಲ್ಪಿಸಬೇಕೆಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಇಂಧನ ಸಚಿವರಾದ ಕೆ.ಜೆ ಜಾರ್ಜ್ ಉತ್ತರ ನೀಡಿ ಈ ವರ್ಷವೇ ಕ್ರಮ ಕೈಗೊಳ್ಳಲು ಆದೇಶ ನೀಡಲಾಗುವುದೆಂದು ಸದನಕ್ಕೆ ಉತ್ತರಿಸಿದರು.