ಕಾಡಾನೆ ದಾಳಿಯಿಂದ ಮೃತಪಟ್ಟ ಬೆಳೆಗಾರನ ಕುಟುಂಬಕ್ಕೆ ಸಾಂತ್ವನ ಹೇಳಿದ ಶಾಸಕ ಪೊನ್ನಣ್ಣ

ಕಾಡಾನೆ ದಾಳಿಯಿಂದ ಮೃತಪಟ್ಟ ಬೆಳೆಗಾರನ ಕುಟುಂಬಕ್ಕೆ ಸಾಂತ್ವನ ಹೇಳಿದ ಶಾಸಕ ಪೊನ್ನಣ್ಣ

ಶ್ರೀಮಂಗಲ;ಹೋಬಳಿ ವ್ಯಾಪ್ತಿಯ ಕುಟ್ಟ ಸಮೀಪ ಕಾಯಿಮಾನಿ ಬಳಿ ಕಾಡಾನೆ ದಾಳಿಗೆ ಬಲಿಯಾದ ಬೆಳೆಗಾರ ಮೂಕಳಮಾಡ ರತ್ತು ಬೋಪಯ್ಯ ಅವರ ಮನೆಗೆ ತೆರಳಿದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಮೃತಪಟ್ಟ ಬೆಳೆಗಾರನ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಈ ಸಂದರ್ಭ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಳಿಮಾಡ ಪ್ರಶಾಂತ್,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ಪ್ರಮುಖರಾದ ಪಲ್ವಿನ್ ಪೂಣಚ್ಚ, ಪೆಮ್ಮಂಡ ರಾಜ ಕುಶಾಲಪ್ಪ, ತೀತಿರ ಮಂದಣ್ಣ, ಮಚ್ಚಮಾಡ ಪ್ರತು ಮತ್ತಿತರರು ಹಾಜರಿದ್ದರು.