ಬಾಡಗರಕೇರಿ ಶ್ರೀ ಮೃತ್ಯುಂಜಯ ದೇವಸ್ಥಾನ ಆಡಳಿತ ಮಂಡಳಿಯಿಂದ ಸಂಸದರ ಭೇಟಿ
ಪೊನ್ನಂಪೇಟೆ:ತಾಲೂಕಿನ ಬಾಡಗರಕೇರಿಯ ಇತಿಹಾಸ ಪ್ರಸಿದ್ಧ ಶ್ರೀ ಮೃತುಂಜಯ ದೇವಸ್ಥಾನದ ಆಡಳಿತ ಮಂಡಳಿಯಿಂದ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಮೈಸೂರು ಕಚೇರಿಯಲ್ಲಿ ಭೇಟಿ ಮಾಡಿ ದೇವಸ್ಥಾನದ ಅಭಿವೃದ್ಧಿಯ ಬಗ್ಗೆ ಸಮಾಲೋಚನೆ ನಡೆಸಲಾಯಿತು.
ಈ ಸಂದರ್ಭ ದೇವಸ್ಥಾನದ ವಾರ್ಷಿಕ ಉತ್ಸವ ಮಾರ್ಚ್ 8ರಂದು ನಡೆಯಲಿದ್ದು ಸಂಸದರನ್ನು ಆಡಳಿತ ಮಂಡಳಿಯಿಂದ ಅಹ್ವಾನ ಪತ್ರ ನೀಡಿ ಆಹ್ವಾನಿಸಲಾಯಿತು. ದೇವಸ್ಥಾನಕ್ಕೆ ಸದ್ಯದಲ್ಲಿಯೇ ಭೇಟಿ ನೀಡಿ, ಅಭಿವೃದ್ಧಿಗೆ ನೆರವು ನೀಡುವುದಾಗಿ ಸಂಸದರು ಭರವಸೆ ನೀಡಿದರು.
ಈ ಸಂದರ್ಭ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಚೋನಿರ ಸುಬ್ರಮಣಿ, ದೇವತಕ್ಕ ಅಣ್ಣೀರ ದಾದ ಗಣಪತಿ,ನಾಡ್ ತಕ್ಕರಾದ ಕಾಯಪಂಡ ಆಯ್ಯಪ್ಪ,ದೇವಸ್ಥಾನ ಕಾರ್ಯದರ್ಶಿ ಬಲ್ಯಮೀದೇರಿರ ಸಂಪತ್,ಉಪಾಧ್ಯಕ್ಷ ಕಾಯಪಂಡ ಸ್ಟಾಲಿಲ್ ಗಣಪತಿ, ದೇವಸ್ಥಾನ ಆಡಳಿತ ಮಂಡಳಿಯ ಕಾಯಪಂಡ ಸುರೇಂದ್ರ,ಅಣ್ಣೀರ ಲೋಕೇಶ್, ಬಲ್ಯಮೀದೇರಿರ ಚೇತನ್ ಸೋಮಣ್ಣ ಇದ್ದರು.