ಮಡಿಕೇರಿ: PWD ಇಂಜಿನಿಯರ್ ಗಿರೀಶ್ ಅವರ ಕಚೇರಿ ಹಾಗೂ ಮನೆಯ ಮೇಲೆ ಲೋಕಾಯುಕ್ತ ದಾಳಿ
ಮಡಿಕೇರಿ:PWD ಎಂಜಿನಿಯರ್ ಗಿರೀಶ್ ಕಚೇರಿ, ಮನೆಯ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಕಾನ್ವೆಂಟ್ ಜಂಕ್ಷನ್ ಇರುವ ಲೋಕೋಪಯೋಗಿ ಕಚೇರಿ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಗಿರೀಶ್, ಮಡಿಕೇರಿ ಕಚೇರಿ, ಕುಶಾಲನಗರ, ಮೈಸೂರಿನ ಮನೆಗಳಮೇಲೆ ದಾಳಿ. ಅಕ್ರಮ ಆಸ್ತಿ ಸಂಪಾದನೆ ದೂರಿನ ಹಿನ್ನೆಲೆ ದಾಳಿ, ಲೋಕಾಯುಕ್ತ DYSP ದಿನಕರ್ ಶೆಟ್ಟಿ ನೇತೃತ್ವದಲ್ಲಿ ಮೈಸೂರಿನಲ್ಲಿ ದಾಳಿ ನಡೆದಿದೆ. ಮಡಿಕೇರಿಯಲ್ಲಿ ಲೋಕಾಯುಕ್ತ ಸಬ್ ಇನ್ಸ್ಪೆಕ್ಟರ್ ವೀಣಾ ನಾಯ್ಕ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.