ಆಗಸ್ಟ್ 17ರಂದು ಮಡಿಕೇರಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಛದ್ಮವೇಷ ಸಮಾಗಮ

ಮಡಿಕೇರಿ:"ಬಾಲಗೋಕುಲ ಮಡಿಕೇರಿ" ಇವರ ವತಿಯಿಂದ ಆಗಸ್ಟ್ 17ರ ಭಾನುವಾರ ಮಕ್ಕಳಿಗೆ "ಶ್ರೀ ಕೃಷ್ಣ ಜನ್ಮಾಷ್ಟಮಿ”ಯ ಪ್ರಯುಕ್ತ “ಶ್ರೀ ಕೃಷ್ಣ, ಬಲರಾಮ, ರುಕ್ಮಣಿ, ರಾಧೆ, ದೇವಕಿ, ಯಶೋಧೆ ವಸುದೇವ ಹಾಗೂ ಕುಚೇಲರ ಛದ್ಮವೇಷ” ಸಮಾಗಮವನ್ನು ಆಯೋಜಿಸಲಾಗಿದೆ. ಈ “ಶ್ರೀ ಕೃಷ್ಣ ಜನ್ಮಾಷ್ಟಮಿ” ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಎಲ್ಲಾ ಛದ್ಮವೇಷದಾರಿಗಳಿಗೆ ಪ್ರಶಂಸನಾ ಪತ್ರ ಹಾಗೂ ಉಡುಗೊರೆಗಳನ್ನು ನೀಡಲಾಗುವುದು, ಭಾಗವಹಿಸಲು ಇಚ್ಚಿಸುವವರು,09-08-2025 ರೊಳಗೆ ಈ ಕೆಳಗಿನ ಸಂಪರ್ಕ ಸಂಖ್ಯೆಗಳಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಕೊಳ್ಳಬೇಕಾಗಿ ಕೋರಿದ್ದಾರೆ. ಮೊಬೈಲ್ ಸಂಖ್ಯೆ: 9448541328, 9740131805