ಮರಗೋಡು: KSRTC ಬಸ್ ಬ್ರೇಕ್ ವಿಫಲ;ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭೀಕರ ಅನಾಹುತ

Jun 2, 2026 - 13:53
 0  1.3k
ಮರಗೋಡು: KSRTC ಬಸ್ ಬ್ರೇಕ್ ವಿಫಲ;ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭೀಕರ ಅನಾಹುತ

ಮರಗೋಡು: ಚಲಿಸುತ್ತಿದ್ದ KSRTC ಬಸ್‌ನ ಬ್ರೇಕ್ ದಿಢೀರ್ ವಿಫಲಗೊಂಡು, ರಸ್ತೆ ಬದಿಗೆ ವಾಲಿ ನಿಂತ ಘಟನೆ ಮರಗೋಡು ಗೌಡ ಸಮಾಜದ ಸಮೀಪ ಇಂದು ನಡೆದಿದೆ. ಚಾಲಕನ ಸಮಯಪ್ರಜ್ಞೆಯಿಂದಾಗಿ ಭೀಕರ ರಸ್ತೆ ಅಪಘಾತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದಂತಾಗಿದೆ.

 ಘಟನೆಯ ವಿವರ: ಇಂದು ಮರಗೋಡು ಗೌಡ ಸಮಾಜದ ಸಮೀಪ ಚಲಿಸುತ್ತಿದ್ದ ಸಾರಿಗೆ ಬಸ್‌ನ ಬ್ರೇಕ್ ವ್ಯವಸ್ಥೆಯಲ್ಲಿ ದಿಢೀರ್ ತಾಂತ್ರಿಕ ದೋಷ ಕಾಣಿಸಿಕೊಂಡು ಬ್ರೇಕ್ ವಿಫಲವಾಗಿದೆ. ಪರಿಸ್ಥಿತಿಯನ್ನು ತಕ್ಷಣವೇ ಅರಿತ ಚಾಲಕ, ಧೃತಿಗೆಡದೆ ಅತ್ಯಂತ ಜಾಣ್ಮೆಯಿಂದ ಬಸ್ಸನ್ನು ನಿಯಂತ್ರಿಸಿ ರಸ್ತೆ ಬದಿಗೆ ಚಲಿಸುವಂತೆ ಮಾಡಿದ್ದಾರೆ.ಬಸ್ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನಿಂತಿದೆ.

 ಪ್ರಯಾಣಿಕರು ಸುರಕ್ಷಿತ: ಘಟನೆಯ ಸಂದರ್ಭದಲ್ಲಿ ಬಸ್ಸಿನಲ್ಲಿದ್ದ ಪ್ರಯಾಣಿಕರೆಲ್ಲರೂ ಯಾವುದೇ ಅಪಾಯವಿಲ್ಲದೆ ಸುರಕ್ಷಿತವಾಗಿ ಹೊರಬಂದಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಯಾವುದೇ ರೀತಿಯ ಗಂಭೀರ ಗಾಯಗಳಾಗಿಲ್ಲ ಹಾಗೂ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಆತಂಕಗೊಂಡಿದ್ದ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸಂಬಂಧಪಟ್ಟ ಸಾರಿಗೆ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

What's Your Reaction?

Like Like 0
Dislike Dislike 0
Love Love 1
Funny Funny 0
Angry Angry 0
Sad Sad 1
Wow Wow 1