ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ ಅವರನ್ನು ಭೇಟಿಯಾದ ಸಚಿವ ಯು.ಟಿ. ಖಾದರ್

ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ ಅವರನ್ನು ಭೇಟಿಯಾದ ಸಚಿವ ಯು.ಟಿ. ಖಾದರ್

ಕ್ಯಾಲಿಕಟ್, ಜೂ. 26 ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರು ಗುರುವಾರ ಕ್ಯಾಲಿಕಟ್‌ನ ಮರ್ಕಝ್ ಸಂಸ್ಥೆಗೆ ಭೇಟಿ ನೀಡಿ, ಇಂಡಿಯನ್ ಗ್ರಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರ ಉಳ್ಳಾಲ ಎನ್‌ಎಸ್‌ಯುಐ ವಿದ್ಯಾರ್ಥಿ ಘಟಕದ ಪ್ರಧಾನ ಕಾರ್ಯದರ್ಶಿ ಯು.ಟಿ. ಫರೀದ್ ಉಪಸ್ಥಿತರಿದ್ದರು.