ನಾಳೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ರಾಮಲಿಂಗಾರೆಡ್ಡಿ ಕೊಡಗು ಜಿಲ್ಲಾ ಪ್ರವಾಸ

Aug 27, 2026 - 17:21
 0  54
ನಾಳೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ರಾಮಲಿಂಗಾರೆಡ್ಡಿ ಕೊಡಗು ಜಿಲ್ಲಾ ಪ್ರವಾಸ

ಮಡಿಕೇರಿ ಆ.27:-ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ರಾಮಲಿಂಗಾರೆಡ್ಡಿ ಅವರು ಆಗಸ್ಟ್, 28 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

 ಮಾನ್ಯ ಸಚಿವರು ಆಗಸ್ಟ್, 28 ರಂದು ಮಧ್ಯಾಹ್ನ 2 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾನವ ಮತ್ತು ಪ್ರಾಣಿ ಸಂಘರ್ಷಗಳಿಗೆ ಸಂಬಂಧಿಸಿದಂತೆ ಜನ ಪ್ರತಿನಿಧಿಗಳು, ಸಂಘಟನೆಗಳು ಹಾಗೂ ಅರಣ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಕೆ.ಎಸ್.ಜಗದೀಶ ರೆಡ್ಡಿ ಅವರು ತಿಳಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0