ಕೊಡಗು ಜಿಲ್ಲೆಗೆ ಕ್ರೀಡೆಯಲ್ಲಿ ಲಭಿಸಿದ ಕೀರ್ತಿ ದೇಶದ ಯಾವ ಜಿಲ್ಲೆಗಳಿಗೆ ಲಭಿಸಲಿಲ್ಲ;ಎ.ಎಸ್.ಪೊನ್ನಣ್ಣ ಅಭಿಪ್ರಾಯ

ಕೊಡಗು ಜಿಲ್ಲೆಗೆ ಕ್ರೀಡೆಯಲ್ಲಿ ಲಭಿಸಿದ ಕೀರ್ತಿ ದೇಶದ ಯಾವ ಜಿಲ್ಲೆಗಳಿಗೆ ಲಭಿಸಲಿಲ್ಲ;ಎ.ಎಸ್.ಪೊನ್ನಣ್ಣ ಅಭಿಪ್ರಾಯ

ನಾಪೋಕ್ಲು; ಕ್ರೀಡೆಯಲ್ಲಿ ಕೊಡಗು ಜಿಲ್ಲೆ ಗಳಿಸಿದ ಯಶಸ್ಸು, ಕೀರ್ತಿ, ಸಾಧನೆ ಭಾರತ ದೇಶದ ಬೇರೆ ಯಾವ ಜಿಲ್ಲೆಗಳಿಗೆ ಲಭಿಸಲಿಲ್ಲ ಎಂದು ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ನವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

 ಕೊಡವ ಕೌಟುಂಬಿಕ ಹಾಕಿ ನಮ್ಮೆ 2026 ಚೇನಂಡ ಕಪ್ ಫೈನಲ್ ಪಂದ್ಯಾವಳಿಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು ಕೊಡಗು ದೇಶದಲ್ಲಿ ಪುಟ್ಟ ಜಿಲ್ಲೆಯಾಗಿದ್ದರೂ 18 ಒಲಂಪಿಯನ್ ಗಳನ್ನು ದೇಶಕ್ಕೆ ಕೊಡಗೆಯಾಗಿ ನೀಡಿದೆ.ಪುಟ್ಟ ಜಿಲ್ಲೆ ಕ್ರೀಡೆಯಲ್ಲಿ ದೊಡ್ಡ ಸಾಧನೆ ಮಾಡಿದೆ ಎಂದರೆ ಅದು ನಮಗೆ ಹೆಮ್ಮೆಯ ವಿಚಾರ ಎಂದು ಹೇಳಿದರು.

ಕ್ರೀಡಾ ತರಬೇತಿ ಕೇಂದ್ರ ಸ್ಥಾಪನೆಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ನವರು 30 ಕೋಟಿ ರೂಗಳ ಅನುದಾನವನ್ನು ಬಜೆಟ್ ನಲ್ಲಿ ಒದಗಿಸಿದ್ದು ರಾಜ್ಯ ಸಭಾ ಸದಸ್ಯರಾದ ಅಜಯ್ ಮಾಕನ್ ರವರು ಈ ಯೋಜನೆಗೆ ವರ್ಷಕ್ಕೆ 5 ಕೋಟಿ ರೂಗಳಂತೆ ಒಟ್ಟು 15 ಕೋಟಿ ರೂಗಳನ್ನು ಒದಗಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು. 

ಇದೇ ಸಂಧರ್ಭದಲ್ಲಿ ಕೇಂದ್ರ ಸರ್ಕಾರದಿಂದ ಹೆಚ್ಚಿನ ನೆರವು ನೀಡುವಂತೆ ಕೇಂದ್ರ ಕ್ರೀಡಾ ಸಚಿವರರಾದ ಡಾ ಮನ್ಸುಖ್ ಮಾಂಡವೀಯ ರವರಿಗೆ ಎ.ಎಸ್.ಪೊನ್ನಣ್ಣ ಹಾಗೂ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಅರುಣ್ ಮಾಚಯ್ಯ ನವರು ಲಿಖಿತ ಮನವಿಯನ್ನು ನೀಡಿದರು.