ತೈಲ ಬಿಕ್ಕಟ್ಟು;ಪೊಲೀಸ್ ಬೆಂಗಾವಲು ಪಡೆ ಹಿಂಪಡೆಯುವಂತೆ ಶಾಸಕ ಪೊನ್ನಣ್ಣ ಸೂಚನೆ
ಮಡಿಕೇರಿ; ದೇಶದಲ್ಲಿ ತಲೆದೋರಿರುವ ತೈಲ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ತಮಗೆ ನೀಡಿರುವ ಪೊಲೀಸ್ ಬೆಂಗಾವಲು ಪಡೆಯನ್ನು ಹಿಂದಕ್ಕೆ ಪಡೆಯುವಂತೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಪತ್ರ ಮುಖೇನ ಸೂಚನೆ ನೀಡಿದ್ದಾರೆ.
