ಮೇ 04ರಂದು ಕಾಡಾನೆಗಳನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ

ಮೇ 04ರಂದು ಕಾಡಾನೆಗಳನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ

ಕುಶಾಲನಗರ ಮೇ. 2: ಕುಶಾಲನಗರ ಅರಣ್ಯ ವಲಯ ಅತ್ತೂರು ಶಾಖೆ ವ್ಯಾಪ್ತಿಯ ಅಂದಗೋವೆ ಗ್ರಾಮದಲ್ಲಿ ಕಾಡಾನೆಗಳನ್ನು ಮರಳಿ ಕಾಡಿಗೆ ಅಟ್ಟುವ ಕಾರ್ಯಚರಣೆಯನ್ನು ಮೇ4. ರಂದು ಹಮ್ಮಿಕೊಳ್ಳಲಾಗಿದ್ದು, ಆ ದಿನದಂದು ತೋಟದ ಮಾಲೀಕರು, ಕಾರ್ಮಿಕರು ಶಾಲಾ ಮಕ್ಕಳು, ಸಾರ್ವಜನಿಕರು ಎಚ್ಚರಿಕೆಯಿಂದ ಇದ್ದು ಆನೆ ಕಾಡಿಗೆ ಅಟ್ಟುವ ಕಾರ್ಯಾಚರಣೆಗೆ ಸಹಕಾರ ನೀಡಬೇಕಾಗಿ ಕುಶಾಲನಗರ ವಲಯ ಅರಣ್ಯ ಅಧಿಕಾರಿ ಆರ್ ರಕ್ಷಿತ್ ಮನವಿ ಮಾಡಿದ್ದಾರೆ.