ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ಯಶಸ್ವಿ

Jul 26, 2026 - 18:57
 0  109
ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ಯಶಸ್ವಿ

ಕುಶಾಲನಗರ, ಜು.23: ಕುಶಾಲನಗರ ಅರಣ್ಯ ವಲಯದ ಆನೆಕಾಡು ಶಾಖೆಯ ಮೀನುಕೊಲ್ಲಿ, ಹೇರೂರು, ಮೋದೂರು , ಅತ್ತೂರು - ನಲ್ಲೂರು ಗ್ರಾಮದ ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಆನೆಕಾಡು ಸಂರಕ್ಷಿತ ಅರಣ್ಯಕ್ಕೆ ಹಿಮ್ಮೆಟ್ಟಿಸುವ ಕಾರ್ಯಾಚರಣೆ ಯಶಸ್ವಿಯಾಗಿದೆ.

ಶನಿವಾರ 6 ಮತ್ತು ಭಾನುವಾರ 2 ಕಾಡಾನೆಗಳನ್ನು ಡ್ರೋನ್ ಸಹಾಯದಿಂದ ಪತ್ತೆ ಹಚ್ಚಿ ಹಿಮ್ಮೆಟ್ಟಿಸಲಾಗಿದ್ದು ಈ ಕಾರ್ಯಾಚರಣೆಯಲ್ಲಿ ವಲಯ ಹಾಗೂ ಉಪವಲಯ ಅರಣ್ಯಾಧಿಕಾರಿಗಳು ಸೇರಿದಂತೆ ಆರ್ ಆರ್ ಟಿ ಪಡೆಯನ್ನೊಳಗೊಂಡಂತೆ ಇಲಾಖೆ ಸಿಬ್ಬಂದಿ ಪಾಲ್ಗೊಂಡಿದ್ದರು. ಸದ್ಯಕ್ಕೆ ತೋಟಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಹಿಮ್ಮೆಟ್ಟಿಸಲಾಗಿದ್ದರೂ ಆನೆಗಳು ಅರಣ್ಯದಿಂದ ಹಿಂದಿರುಗುವ ಸಾಧ್ಯತೆಗಳು ಇರಬಹುದೆಂದು ಮೂಲಗಳಿಂದ ತಿಳಿದು ಬಂದಿದೆ.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0