ವೀರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಕಾನೂನು ಪದವಿ ಕಾಲೇಜು ಆರಂಭಿಸಲು ಅನುಮತಿ

ವೀರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಕಾನೂನು ಪದವಿ ಕಾಲೇಜು ಆರಂಭಿಸಲು ಅನುಮತಿ

ಮಡಿಕೇರಿ: ಗೋಣಿಕೊಪ್ಪಲು ಕಾವೇರಿ ಎಜುಕೇಷನ್‌ ಸೊಸೈಟಿ ಆಧೀನದಲ್ಲಿರುವ ವೀರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಕಾನೂನು ಪದವಿ ಕಾಲೇಜನ್ನು ಆರಂಭಿಸಲು ಅನುಮತಿ ಲಭಿಸಿದ್ದು, ಆ.28ರೊಳಗೆ ವಿದ್ಯಾರ್ಥಿಗಳು ನೋಂದಣಿ ಮಾಡಕೊಳ್ಳಬಹುದು ಎಂದು ಗೋಣಿಕೊಪ್ಪ ಕಾವೇರಿ ಎಜುಕೇಷನ್ ಸೊಸೈಟಿ ಅಧ್ಯಕ್ಷ ಸುಗುಣ ಮುತ್ತಣ್ಣ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವೀರಾಜಪೇಟೆಯ ಕಾವೇರಿ ಕಾಲೇಜು ಆವರಣದಲ್ಲಿ ಕೆ.ವಿ.ವಿ ಎಜುಕೇಷನ್‌ನಲ್ ಟ್ರಸ್ಟ್ ಅವರ ಸಹಯೋಗದೊಂದಿಗೆ ಮೂರು ವರ್ಷಗಳ ಕಾನೂನು ಪದವಿ ಕಾಲೇಜನ್ನು ನೂತನವಾಗಿ ಪ್ರಾರಂಭಿಸಲಾಗಿದೆ. ಕಾಲೇಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಬಾರ್ ಕೌನ್ಸಿಲ್‌ನ ಅನುಮತಿ ಪಡೆಯಲಾಗಿದೆ. ಕಾನೂನು ಪದವಿ ಕಾಲೇಜು, ಕರ್ನಾಟಕ ರಾಜ್ಯ ಕಾನೂನು ಮಹಾ ವಿಶ್ವವಿದ್ಯಾನಿಲಯ ಹುಬ್ಬಳ್ಳಿ ಮಾನ್ಯತೆಗೊಳಪಟ್ಟಿದು, ಬಾರ್ ಕೌನ್ಸಿಲ್ ಆಫ್ ಇಂಡಿಯಾ ದೆಹಲಿ ಇವರಿಂದ ಅನುಮೋದನೆಗೊಂಡಿದೆ ಎಂದು ಮಾಹಿತಿ ನೀಡಿದರು. ಕೆ.ವಿ.ವಿ ಎಜುಕೇಷನಲ್ ಟ್ರಸ್ಟ್‌ನ ಅಧ್ಯಕ್ಷ ಜಿ.ಎನ್.ನಾಗೇಂದ್ರ ಮಾತನಾಡಿ, ಮೂರು ವರ್ಷದ ಕಾನೂನು ಪದವಿ ಶಿಕ್ಷಣವನ್ನು ಅತ್ಯಾಧುನಿಕ ಸೌಲಭ್ಯದೊಂದಿಗೆ ನುರಿತ ಉಪನ್ಯಾಸಕರು, ಸುಸಜ್ಜಿತ ಗ್ರಂಥಾಲಯ ಸೌಲಭ್ಯ, ಮಾದರಿ ಕೋರ್ಟ್, ಇಂಟರ್ನ್‌ಶಿಫ್ ಸಹಾಯ, ಪ್ರಾಯೋಗಿಕ ತರಗತಿಗಳು, ಕರ್ನಾಟಕ ಲಾ ಅಕಾಡಮಿ ಇವರೊಂದಿಗೆ ಆನ್‌ಲೈನ್ ಉಪನ್ಯಾಸಗಳು, ವಸತಿ ನಿಲಯ, ಬಸ್ ಸೌಲಭ್ಯ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಒದಗಿಸಲಾಗಿದೆ. ಕೊಡಗು ಹಾಗೂ ಅಕ್ಕ ಪಕ್ಕದ ಜಿಲ್ಲೆಯ ವಿದ್ಯಾರ್ಥಿಗಳು ಕಾನೂನು ಪದವಿ ಕಾಲೇಜಿನ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು.

 ಸುದ್ದಿಗೋಷ್ಠಿಯಲ್ಲಿ ಗೋಣಿಕೊಪ್ಪ ಕಾವೇರಿ ಎಜುಕೇಷನ್ ಸೊಸೈಟಿ ಗೌರವ ಕಾರ್ಯದರ್ಶಿ ಕುಲ್ಲಚಂಡ.ಪಿ.ಬೋಪಣ್ಣ, ಕೆ.ವಿ.ವಿ ಎಜುಕೇಷನಲ್ ಟ್ರಸ್ಟ್‌ನ ಕಾರ್ಯದರ್ಶಿ ವೇದಿಕ ರೆಡ್ಡಿ, ಟ್ರಸ್ಟಿ ಪ್ರಶಾಂತ್ ಉಪಸ್ಥಿತರಿದ್ದರು.