ಪೊನ್ನಂಪೇಟೆ: ನೂತನ ವಿದ್ಯುತ್ ಪರಿವರ್ತಕ ಲೋಕಾರ್ಪಣೆ ಮಾಡಿದ ಎ.ಎಸ್ ಪೊನ್ನಣ್ಣ

ಪೊನ್ನಂಪೇಟೆ:ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣನವರು ಪೊನ್ನಂಪೇಟೆ ತಾಲೂಕಿನ ಹರಿಹರ, ಬೆಳ್ಳೂರು ಹಾಗೂ ಹುದಿಕೇರಿ ಭಾಗದಲ್ಲಿ ಮೂರು 25 ಕೆವಿ ವಿದ್ಯುತ್ ಪರಿವರ್ತಕಗಳಿಗೆ ಚಾಲನೆ ನೀಡಿದರು.ಹರಿಹರ, ಬೆಳ್ಳೂರು ಹಾಗೂ ಹುದಿಕೇರಿಯಲ್ಲಿ ವಿದ್ಯುತ್ ಪರಿವರ್ತಕಗಳಿಗೆ, ಶಾಸಕರು ಅಧಿಕೃತವಾಗಿ ಹಸಿರು ನಿಶಾನೆ ನೀಡಿದರು.
ಬಳಿಕ ಮಾತನಾಡಿದ ಶಾಸಕ ಎ.ಎಸ್ ಪೊನ್ನಣ್ಣ, ತಾನು ಈ ಹಿಂದೆ ಚುನಾವಣೆಗೆ ಮೊದಲು ಆಶ್ವಾಸನೆ ನೀಡಿದಂತೆ, ಕ್ಷೇತ್ರಾದ್ಯಂತ ಗುಣಮಟ್ಟದ ಹಾಗೂ ನಿರಂತರ ವಿದ್ಯುತ್ ಸರಬರಾಜಿಗೆ ಬೇಕಾದಂತಹ ಹೆಚ್ಚುವರಿ ಅನುದಾನದಲ್ಲಿ ಈ ಕಾರ್ಯಕ್ರಮವನ್ನು ಮಾಡುತ್ತಿರುವುದಾಗಿ ಹೇಳಿದರು. ಈ ಮಹತ್ವಾಕಾಂಕ್ಷೆಯ ಯೋಜನೆಗೆ ಕಳೆದ ಫೆಬ್ರವರಿಯಲ್ಲಿ ತಾನು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ನೀಡಿದ್ದು, ಬಹುತೇಕ ಮುಂದಿನ ಜನವರಿ 2026ರ ಒಳಗಾಗಿ ಕ್ಷೇತ್ರಾದ್ಯಂತ ಈ ಯೋಜನೆಯ ಪೂರ್ಣಗೊಳ್ಳುವ ನೀರಿಕ್ಷೆ ಇದೆ ಎಂದು ವಿವರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನದ ಪ್ರಾಧಿಕಾರ ಅಧ್ಯಕ್ಷರಾದ ಶ್ರೀ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಿದೇರಿರ ನವೀನ್, ವಲಯ ಕಾಂಗ್ರೆಸ್ ಅಧ್ಯಕ್ಷಗಳು,ಪಕ್ಷದ ಹಿರಿಯ -ಕಿರಿಯ ಮುಖಂಡರು, ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.
What's Your Reaction?






