ನಾಳೆ ವಿದ್ಯುತ್ ವ್ಯತ್ಯಯ

ಮಡಿಕೇರಿ:-66/11ಕೆ.ವಿ ಪೊನ್ನಂಪೇಟೆ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಗೋಣಿಕೊಪ್ಪ ನಗರ ವ್ಯಾಪ್ತಿಯಲ್ಲಿ ಸೆಪ್ಟೆಂಬರ್, 20 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ದಸರಾ ಹಬ್ಬದ ಪ್ರಯುಕ್ತ ನಿರ್ವಹಣಾ ಕಾಮಗಾರಿ ನಡೆಸಬೇಕಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಶಾಂತಿನಗರ, ಗಣಪತಿನಗರ, ಜೋಡುಬೀಟೆ, ಕಾಫಿ ಬೋರ್ಡ್, ಅರುವತೋಕ್ಲು, ಗೋಣಿಕೊಪ್ಪಲು ನಗರ, ಕೊಪ್ಪ, ಪಟೇಲನಗರ, ನೇತಾಜಿ ಲೇಔಟ್, ಉಮಾ ಮಹೇಶ್ವರಿ ಲೇಔಟ್, ಗೋಣಿಕೊಪ್ಪಲು ಬಸ್ ನಿಲ್ದಾಣ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಅವರು ಕೋರಿದ್ದಾರೆ.