ಪ್ರತಿಭಾ ಕಾರಂಜಿ: ರಂಗೋಲಿ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಪುಣ್ಯ ಆಯ್ಕೆ

Jan 30, 2026 - 18:11
 0  311
ಪ್ರತಿಭಾ ಕಾರಂಜಿ:  ರಂಗೋಲಿ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಪುಣ್ಯ ಆಯ್ಕೆ

ಕುಶಾಲನಗರ, ಜ.30 : ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವದಲ್ಲಿ ರಂಗೋಲಿ ಸ್ಪರ್ಧೆಯಲ್ಲಿ ಪಾಲ್ಗೊಂಡ ತೋಳೂರು ಶೆಟ್ಟಳ್ಳಿ ಡಾ ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಕೆ.ಎನ್.ಪುಣ್ಯ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆ ಯಾಗಿದ್ದಾಳೆ ಎಂದು ಶಾಲೆಯ ಪ್ರಾಂಶುಪಾಲ ಚಂದ್ರಶೇಖರ್ ರೆಡ್ಡಿ ತಿಳಿಸಿದ್ದಾರೆ.

ಕೊಪ್ಪಳದಲ್ಲಿ ಫೆ.7 ಮತ್ತು 8 ರಂದು ನಡೆಯಲಿರುವ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಕೊಡಗು ಜಿಲ್ಲೆಯಿಂದ ಆಯ್ಕೆಗೊಂಡಿರುವ ವಿದ್ಯಾರ್ಥಿನಿ ಪುಣ್ಯಳನ್ನು ಶುಕ್ರವಾರ ಶಾಲೆಯಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಪ್ರಾಂಶುಪಾಲ ಚಂದ್ರಶೇಖರ್ ರೆಡ್ಡಿ ಅಭಿನಂದಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು ಇದ್ದರು. ವಿದ್ಯಾರ್ಥಿನಿ ಪುಣ್ಯ, ಕುಶಾಲನಗರ ತಾಲ್ಲೂಕಿನ‌ ಕೂಡ್ಲೂರು ಗ್ರಾಮದ ಕೆ.ಎನ್.ನಾಗರಾಜ ಮತ್ತು ರಜನಿ ದಂಪತಿಯ ಪುತ್ರಿಯಾಗಿದ್ದಾಳೆ ಎಂದು ತಿಳಿಸಲಾಗಿದೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0