ಕೃಷಿ ಕ್ಷೇತ್ರದಲ್ಲಿನ ಕೊಡುಗೆ ಗುರುತಿಸಿ ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಪ್ರೊ. ಅಶೋಕ ಸಂಗಪ್ಪ ಆಲೂರ ಅವರಿಗೆ ಫೆಲೋಶಿಪ್ ಪ್ರಶಸ್ತಿ ಪ್ರದಾನ

ಕೃಷಿ ಕ್ಷೇತ್ರದಲ್ಲಿನ ಕೊಡುಗೆ ಗುರುತಿಸಿ ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಪ್ರೊ. ಅಶೋಕ ಸಂಗಪ್ಪ ಆಲೂರ ಅವರಿಗೆ ಫೆಲೋಶಿಪ್ ಪ್ರಶಸ್ತಿ ಪ್ರದಾನ

ಕುಶಾಲನಗರ: ಕೃಷಿ ಕ್ಷೇತ್ರದಲ್ಲಿನ ಕೊಡುಗೆ ಗುರುತಿಸಿ ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಪ್ರೊ. ಅಶೋಕ ಸಂಗಪ್ಪ ಆಲೂರ ಅವರಿಗೆ ಕರ್ನಾಟಕ ಸರ್ಕಾರದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಿಂದ ಫೆಲೋಶಿಪ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

ಕರ್ನಾಟಕ ಸರ್ಕಾರದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಸಭಾಂಗಣದಲ್ಲಿ ಜರುಗಿದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸನ್ಮಾನ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಸಣ್ಣ ನೀರಾವರಿ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಆದ ಬೋಸ್‌ರಾಜು ಅವರು ಪ್ರಶಸ್ತಿ ಪ್ರದಾನ ಮಾಡಿದರು.