Kodagu

ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ನೇತೃತ್ವದಲ್ಲಿ ನಾಳೆ ಮಡಿಕೇರಿಯಲ್ಲಿ ಪ್ರತಿಭಟನೆ

admincoorgdaily

ಮಡಿಕೇರಿ:ಕೇರಳ ರಾಜ್ಯದ ಇಬ್ಬರು ಕ್ರೈಸ್ತ ಕನ್ಯಾಸ್ತ್ರೀಯರನ್ನು ಸುಳ್ಳು ಮೊಕದ್ದಮೆ ಹೂಡಿ ಛತ್ತೀಸ್‌ಗಢ ರಾಜ್ಯದಲ್ಲಿ ಬಂಧಿಸಿರುವ ಕ್ರಮವನ್ನು ಖಂಡಿಸಿ ಆ.2 (ಶನಿವಾರ )ರಂದು ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ನೇತೃತ್ವದಲ್ಲಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಅಸೋಸಿಯೇಷನ್ ನ ಜಿಲ್ಲಾಧ್ಯಕ್ಷ ಜಾನ್ಸನ್ ಪಿಂಟೋ ತಿಳಿಸಿದ್ದಾರೆ. ಮಧ್ಯಾಹ್ನ 3 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಪ್ರತಿಭಟನೆ ನಡೆಸಲಾಗುವುದು. ಕನ್ಯಾಸ್ತ್ರೀಯರನ್ನು ತಕ್ಷಣ ಬಿಡುಗಡೆ ಮಾಡಬೇಕು, ಸುಳ್ಳು ಹಿಂಪಡೆಯಬೇಕು ಮತ್ತು ಮೊಕದ್ದಮೆಯನ್ನು ಬಂಧಿಸಲು ಕಾರಣಕರ್ತರಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.