ಗ್ರಾ.ಪಂ.ಪುನರ್ ರಚನೆ; ಕರಡು ಅಧಿಸೂಚನೆ ಪ್ರಕಟ

Jan 31, 2026 - 17:36
 0  322
ಗ್ರಾ.ಪಂ.ಪುನರ್ ರಚನೆ; ಕರಡು ಅಧಿಸೂಚನೆ ಪ್ರಕಟ

ಮಡಿಕೇರಿ ಜ.31:-ವಿರಾಜಪೇಟೆ, ಪೊನ್ನಂಪೇಟೆ ಹಾಗೂ ಕುಶಾಲನಗರ ತಾಲ್ಲೂಕಿನ ಕೆಲವು ಗ್ರಾಮ ಪಂಚಾಯಿತಿಗಳನ್ನು ಪುನರ್ ರಚಿಸಲು ಕರಡು ಅಧಿಸೂಚನೆ ಪ್ರಕಟಿಸಿ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶ ಹೊರಡಿಸಿದ್ದಾರೆ. ಈ ಕರಡು ಅಧಿಸೂಚನೆಯಿಂದ ಬಾಧಿತರಾಗುವವರು ಫೆಬ್ರವರಿ, 6 ರೊಳಗೆ ತಮ್ಮ ಆಕ್ಷೇಪಣೆಯನ್ನು ಸಲ್ಲಿಸುವಂತೆ ತಿಳಿಸಿದ್ದಾರೆ.

 ಪುನರ್ ರಚನೆ ಗ್ರಾಮಗಳು: ವಿರಾಜಪೇಟೆ ತಾಲ್ಲೂಕಿನ ಚೆಂಬೆಬೆಳ್ಳೂರು ಗ್ರಾ.ಪಂ.ವ್ಯಾಪ್ತಿಯ ಚೆಂಬೆಬೆಳ್ಳೂರು, ಕುಕ್ಲೂರು, ದೇವಣಗೇರಿ, ಐಮಂಗಲ, ಮಗ್ಗುಲ, ಬಿಟ್ಟಂಗಾಲ ಗ್ರಾಮದ ಬಿಟ್ಟಂಗಾಲ, ಬಾಳುಗೋಡು, ನಾಂಗಾಲ, 1ನೇ ರುದ್ರಗುಪ್ಪೆ, ವಿ.ಬಾಡಗ, ಬೇಟೋಳಿ ಗ್ರಾ.ಪಂ.ನ ಬೇಟೋಳಿ, ಹೆಗ್ಗಳ, ಆರ್ಜಿ ಗ್ರಾಮ ಪಂಚಾಯಿತಿಯ ಆರ್ಜಿ, ಕೆದಮುಳ್ಳೂರು ಗ್ರಾ.ಪಂ.ನ ಕೆದಮುಳ್ಳೂರು, ಕೊಟ್ಟೋಳಿ, ಪಾಲಂಗಾಲ, ಕದನೂರು ಗ್ರಾ.ಪಂ.ನ ಕದನೂರು, ಅರಮೇರಿ ಹಾಗೂ ಮೈತಾಡಿ ಗ್ರಾಮಗಳನ್ನು ಆಯಾಯ ಪಂಚಾಯಿತಿ ವ್ಯಾಪ್ತಿಗೆ ಒಳಪಡಿಸಲಾಗಿದೆ.

ಪೊನ್ನಂಪೇಟೆ ತಾಲ್ಲೂಕಿನ ಹಾತೂರು ಗ್ರಾಮದ ಹಾತೂರು, ಕೈಕೇರಿ, ಕುಂದ, ಬಲ್ಯಮಂಡೂರು ಗ್ರಾ.ಪಂ.ನ ಬಲ್ಯಮಂಡೂರು, ಚಿಕ್ಕಮಂಡೂರು, ಕುಶಾಲನಗರ ತಾಲ್ಲೂಕಿನ ಗುಡ್ಡೆಹೊಸೂರು ಗ್ರಾ.ಪಂ.ನ ಬಸವನಹಳ್ಳಿ, ರಸಲ್‍ಪುರ, ಅತ್ತೂರು ಅರಣ್ಯ, ಆನೆಕಾಡು ಅರಣ್ಯ, ಬೈಚನಹಳ್ಳಿಯಲ್ಲಿ ಆಯಾಯ ಪಂಚಾಯಿತಿ ವ್ಯಾಪ್ತಿಗೆ ಒಳಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕರಡು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0