ಚೋಕಂಡಳ್ಳಿ-ನಲ್ವತೋಕ್ಲು ಮೊಹಿದ್ದೀನ್ ಜುಮಾ ಮಸೀದಿಗೆ ಅನುದಾನ ಒದಗಿಸಲು ಸಂಸದ ಯದುವೀರ್ ಒಡೆಯರ್ ಅವರಿಗೆ ಮನವಿ
ಸಿದ್ದಾಪುರ:ಇಲ್ಲಿನ ಎಸ್ ಎನ್ ಡಿ ಪಿ (ಶ್ರೀ ನಾರಾಯಣ ಗುರು ಪರಿಪಾಲನ ಯೋಗ) ಸಭಾಂಗಣದಲ್ಲಿ ನಡೆದ ಎಸ್.ಎನ್.ಡಿ ಪಿ ಮಹಿಳಾ ಸಂಘಟನೆಗಳ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರಾದ ಯದುವೀರ್ ಒಡೆಯರ್ ಅವರನ್ನು ವಿರಾಜಪೇಟೆ ತಾಲೂಕು ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಮಜೀದ್ ಚೋಕಂಡಳ್ಳಿ ಅವರ ನೇತೃತ್ವದಲ್ಲಿ ಭೇಟಿಯಾಗಿ ಚೋಕಂಡಳ್ಳಿ-ನಲ್ವತೋಕ್ಲು ಮೊಹಿದೀನ್ ಜುಮಾ ಮಸೀದಿಯ ಕಾಮಗಾರಿಗಳಿಗೆ ಸಂಸದರ ವಿಶೇಷ ನಿಧಿಯಿಂದ ಅನುದಾನವನ್ನು ನೀಡಲು ಮನವಿ ಪತ್ರವನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ವಿರಾಜಪೇಟೆ ತಾಲೂಕು ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಮಜೀದ್ ಚೋಕಂಡಳ್ಳಿ, ಕೊಡಗು ಜಿಲ್ಲಾ ಜೆಡಿಎಸ್ ಎಸ್ಸಿ- ಎಸ್ಟಿ ಘಟಕದ ಜಿಲ್ಲಾಧ್ಯಕ್ಷೆ ಜಯಮ್ಮ ಅಮ್ಮತಿ, ಮಡಿಕೇರಿ ತಾಲೂಕು ಕ್ಷೇತ್ರದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಅಶ್ರಫ್ ಹಾಕತ್ತೂರು, ಕುಶಾಲನಗರ ತಾಲೂಕು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಶಿಯಾಬುದ್ದೀನ್ ವಿ.ಪಿ.ಎಸ್. ನೆಲ್ಲಿಹುದಿಕೇರಿ, ವಿರಾಜಪೇಟೆ ತಾಲೂಕು ಯುವ ಜನತಾದಳದ ಅಧ್ಯಕ್ಷರಾದ ಸೈಫುದ್ದೀನ್ ಜಾಮಿಯಾಲ, ಹಾಜರಿದ್ದರು.