ನಾಳೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಕೊಡಗು ಜಿಲ್ಲಾ ಪ್ರವಾಸ

ನಾಳೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ  ಕೊಡಗು ಜಿಲ್ಲಾ ಪ್ರವಾಸ

ಮಡಿಕೇರಿ :-ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ನವೆಂಬರ್, 11 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮಾನ್ಯ ಸಚಿವರು ನವೆಂಬರ್, 11 ರಂದು ಬೆಳಗ್ಗೆ 10.30 ಗಂಟೆಗೆ ಕುಶಾಲನಗರದ ಮಾದಪಟ್ಟಣದಲ್ಲಿ ಕುಶಾಲನಗರ ನೂತನ ತಾಲ್ಲೂಕು ಕಚೇರಿ ಕಟ್ಟಡ ನಿರ್ಮಾಣದ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಡಾ.ರವಿ ಎಂ.ತಿರ್ಲಾಪೂರ ಅವರು ತಿಳಿಸಿದ್ದಾರೆ.