ಜೋಡುಪಾಲ ಬಳಿ ರಸ್ತೆ ಬದಿ ಮಣ್ಣು ಕುಸಿತ:ಜಿಲ್ಲಾಧಿಕಾರಿ ಪರಿಶೀಲನೆ
admincoorgdaily
ಮಡಿಕೇರಿ:ರಾಷ್ಟ್ರೀಯ ಹೆದ್ದಾರಿ ಜೋಡುಪಾಲ ಬಳಿ ರಸ್ತೆ ಬದಿ ಮಣ್ಣು ಜರಿಯುತ್ತಿರುವ ಸ್ಥಳಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಗುರುವಾರ ಭೇಟಿ ನೀಡಿ ಪರಿಶೀಲಿಸಿದರು. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಭೂ ವಿಜ್ಞಾನಿಗಳಾದ ಎಂ.ಎಸ್.ರಾಹುಲ್, ರೋಜಾ, ಲಾಯಲ್ ಮೀರಾಂಡ, ಜಿಲ್ಲಾ ವಿಪತ್ತು ನಿರ್ವಹಣಾ ಪರಿಣತರಾದ ಅನನ್ಯ ವಾಸುದೇವ್ ಇತರರು ಇದ್ದರು.