ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ನೇಷನ್ ಬಿಲ್ಡರ್ ಪ್ರಶಸ್ತಿ ಪ್ರದಾನ: ಕ್ರಿಯಾಶೀಲ ಪೀಳಿಗೆಯ ನಿಮಾ೯ಣಕ್ಕೆ ಶಿಕ್ಷಕರು ಮುಂದಾಗಿ - ಗಂಗಾಧರ ಗೌಡ

ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ನೇಷನ್ ಬಿಲ್ಡರ್ ಪ್ರಶಸ್ತಿ ಪ್ರದಾನ: ಕ್ರಿಯಾಶೀಲ ಪೀಳಿಗೆಯ ನಿಮಾ೯ಣಕ್ಕೆ ಶಿಕ್ಷಕರು ಮುಂದಾಗಿ - ಗಂಗಾಧರ ಗೌಡ

ಮಡಿಕೇರಿ: ವಿದ್ಯಾಥಿ೯ಗಳಲ್ಲಿ ಸೖಜನಶೀಲತೆ ಸೖಷ್ಟಿಸುವ ಮೂಲಕ ಕ್ರಿಯಾಶೀಲ ಪೀಳಿಗೆಯ ನಿಮಾ೯ಣಕ್ಕೆ ಶಿಕ್ಷಕ ವೖಂದ ಕಾರಣವಾಗಬೇಕೆಂದು ರಾಷ್ಟ್ರಪ್ರಶಸ್ತಿ ವಿಜೇತ ಶಿಕ್ಷಕ ಕೆ.ಆರ್. ಗಂಗಾಧರ ಗೌಡ ಕರೆ ನೀಡಿದ್ದಾರೆ. ನಗರದ ರೋಟರಿ ಸಭಾಂಗಣದಲ್ಲಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ನೇಷನ್ ಬಿಲ್ಡರ್ ಪ್ರಶಸ್ತಿ ಪ್ರಧಾನ ಮಾಡಿ ಮಾತನಾಡಿದ ಗಂಗಾಧರ ಗೌಡ, ಜೀವನದ ಸೌಂದಯ೯ವೇ ಅದ್ಬುತವಾಗಿರುತ್ತದೆ. ನಾಳೆ ಎಂಬುದೇ ಜೀವನದ ಭರವಸೆಯಾಗಿರುವಾಗ ಮಕ್ಕಳ ಪಾಲಿಗೆ ಇಂಥ ನಾಳೆಗಳನ್ನು ಅತ್ಯಂತ ಸುಂದರವಾಗಿಸುವ ನಿಟ್ಟಿನಲ್ಲಿ ಶಿಕ್ಷಕರು ಮಹತ್ವದ ಪಾತ್ರ ವಹಿಸುತ್ತಾರೆ ಎಂದೂ ಅವರು ಅಭಿಪ್ರಾಯಪಟ್ಟರು. ಓವ೯ ಗುರು, ಬ್ರಹ್ಮ, ವಿಷ್ಮು, ಮಹೇಶ್ವರರು ನಿವ೯ಹಿಸಿದಂಥ ಸೖಜನಶೀಲತೆ, ತಂತ್ರಗಾರಿಕಾ ನಿಪುಣ, ಲಯಕತ೯,ನ ಪಾತ್ರ ವಹಿಸುತ್ತಾರೆ. ಹೀಗಾಗಿಯೇ ಇಂದಿಗೂ ಸಮಾಜದಲ್ಲಿ ಗುರುವಿನ ಸ್ಥಾನಕ್ಕೆ ಪಯಾ೯ಯ ಎಂಬುದೇ ಇಲ್ಲ ಎಂದು ಹೆಮ್ಮೆಯಿಂದ ನುಡಿದ ಗಂಗಾಧರ ಗೌಡ, ಉತ್ತಮ ವಿದ್ಯಾಥಿ೯ಗಳನ್ನು ರೂಪಿಸಿದರೆ ಅದಕ್ಕಿಂತ ಸಾಥ೯ಕತೆ ಶಿಕ್ಷಕನೋವ೯ನಿಗೆ ಬೇಕಾಗಿಲ್ಲಿ ಎಂದೂ ಅನಿಸಿಕೆ ವ್ಯಕ್ತಪಡಿಸಿದರು.

ರೋಟರಿ ವಲಯ 6 ರ ಸಹಾಯಕ ಗವನ೯ರ್ ಧಿಲನ್ ಚಂಗಪ್ಪ ಮಾತನಾಡಿ, ಭಾರತದಂಥ ದೇಶವು ಕೇವಲ ಮೂಲಸೌಲಭ್ಯದಿಂದಾಗಿ ಮಾತ್ರ ಅಭಿವೖದ್ದಿಯಾಗದೇ ಸೇವಾನಿರತ ಶಿಕ್ಷಕರ ಗರಡಿಯಲ್ಲಿ ಪಳಗಿ ಉತ್ತಮ ಪ್ರಜೆಗಳಾದವರಿಂದಾಗಿಯೂ ಪ್ರಗತಿಯಾಗಿದೆ ಎಂದರು. ಪ್ರತೀ ವಷ೯ವೂ ಸಾಮಾಜಿಕ ಸೇವಾ ಸಂಸ್ಥೆಯಾದ ರೋಟರಿಯು ತನ್ನ ಕಾಯ೯ವ್ಯಾಪ್ತಿಯಲ್ಲಿನ ಅತ್ಯುತ್ತಮ ಶಿಕ್ಷಕರನ್ನು ಗುರುತಿಸಿ ಅವರಿಗೆ ನೇಷನ್ ಬಿಲ್ಡರ್ ಪ್ರಶಸ್ತಿಯನ್ನು ಪ್ರಧಾನ ಮಾಡುವ ಮೂಲಕ ಸಮಾಜದ ಪರವಾಗಿ ಶಿಕ್ಷ ಕ ವಗ೯ವನ್ನು ಗೌರವಿಸುತ್ತಾ ಬಂದಿದೆ. ಆ ಮೂಲಕ ಪ್ರಶಸ್ತಿಗೆ ಭಾಜನರಾಗುವ ಶಿಕ್ಷಕರ ಸೇವೆಗೆ ಪ್ರೋತ್ಸಾಹ ನೀಡುವ ಪ್ರಯತ್ನ ಮಾಡಪಲಾಗುತ್ತಿದೆ ಎಂದರು.

ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ರತ್ನಾಕರ್ ರೈ ಮಾತನಾಡಿ, ಕಳೆದ 9 ವಷ೯ಗಳಿಂದ ರೋಟರಿ ಮಿಸ್ಟಿ ಹಿಲ್ಸ್ ಸಮಾಜದಲ್ಲಿನ ಸಾಧಕ ಶಿಕ್ಷಕರಿಗೆ ಗೌರವ ಸಲ್ಲಿಸುತಾ ಬಂದಿದೆ. ಅಂಗನವಾಡಿ ಕೇಂದ್ರಗಳಿಗೆ ಅಗತ್ಯ ನೆರವು ಸೇರಿದಂತೆ ಶೈಕ್ಷಣಿಕ ಕ್ಷೇತ್ರಕ್ಕೆ ಮಿಸ್ಟಿ ಹಿಲ್ಸ್ ಅನೇಕ ರೀತಿಯಲ್ಲಿ ಕೊಡುಗೆ ನೀಡಿದೆ ಎಂದು ಮಾಹಿತಿ ನೀಡಿದರು.

ರೋಟರಿ ಮಿಸ್ಟಿ ಹಿಲ್ಸ್ ಕಾಯ೯ದಶಿ೯ ಬಿ.ಕೆ. ಕಾಯ೯ಪ್ಪ ವಂದಿಸಿದ ಕಾಯ೯ಕ್ರಮದಲ್ಲಿ ಮಿಸ್ಟಿ ಹಿಲ್ಸ್ ವೋಕೇಷನಲ್ ಸವೀ೯ಸ್ ನಿದೇ೯ಶಕ ಡಾ.ಸಿ.ಆರ್.ಪ್ರಶಾಂತ್ ಹಾಜರಿದ್ದರು. ಮಿಸ್ಟಿ ಹಿಲ್ಸ್ ನಿದೇ೯ಶಕ ಅನಿಲ್ ಹೆಚ್.ಟಿ. ನಿರೂಪಿಸಿ, ಅಂಬೆಕಲ್ ವಿನೋದ್, ಬಿ.ಜಿ. ಅನಂತಶಯನ, ದೇವಣಿರ ತಿಲಕ್, ಲೀನಾ ಪೂವಯ್ಯ, ಸ್ನೇಹಿತ್, ಶುಭಾವಿಶ್ವನಾಥ್,ಸನ್ಮಾನಿತರ ಪರಿಚಯ ಮಡಿದರು. ಸೆ.30 ರಂದು ಮಿಸ್ಟಿ ಹಿಲ್ಸ್ ವತಿಯಿಂದ ಆಯೋಜಿತ ಮಕ್ಕಳ ದಸರಾ ಪ್ರಚಾರದ ರೀಲ್ಸ್ ನ್ನು ಇದೇ ಸಂದಭ೯ ಬಿಡುಗಡೆಗೊಳಿಸಲಾಯಿತು. 

ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಆರು ಮಂದಿಗೆ ನೇಷನ್ ಬಿಲ್ಡರ್ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಮದೆ ಮಹೇಶ್ವರ ಶಿಕ್ಷಣ ಸಂಸ್ಥೆಯ ನಿವೖತ್ತ ಪ್ರಾಂಶುವಾಲ ಬಾರಿಯಂಡ ಜೋಯಪ್ಪ, ಮಡಿಕೇರಿಯ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲಾ ಪ್ರಾಂಶುಪಾಲೆ ಬಾಳೆಯಡ ಸವಿತಾ ಪೂವಯ್ಯ, ಕೊಡಗು ವಿದ್ಯಾಲಯದ ಶಿಕ್ಷಕಿ ಅಲೆಮಾಡ ಚಿತ್ರಾನಂಜಪ್ಪ, ಮೂನಾ೯ಡು ಪ.ಪೂ.ಕಾಲೇಜಿನ ಉಪಪ್ರಾಂಶುಪಾಲೆ ಪಳಂಗಂಡ ದೇವಕ, ಸುಂಟಿಕೊಪ್ಪದ ಸ್ವಸ್ಥ ವಿಶೇಷ ಮಕ್ಕಳ ಕಲಿಕಾ ಶಾಲೆಯ ಕೆ.ಲೀಲಾವತಿ, ನಾಪೋಕ್ಲುವಿನ ಶ್ರೀರಾಮಟ್ರಸ್ಟ್ ಶಿಕ್ಷಕಿ ಶ್ವೇತಾ ಲೀಲಾವತಿ, ಅವರಿಗೆ ರಾಷ್ಟ್ರಪ್ರಶಸ್ತಿ ವಿಜೇತ ಶಿಕ್ಷಕ ಅರಂತೋಡಿನ ಗಂಗಾಧರ ಗೌಡ ಅವರು ನೇಷನ್ ಬಿಲ್ಡರ್ ಪ್ರಶಸ್ತಿ ಪ್ರಧಾನ ಮಾಡಿದರು.