ಬಸವಣ್ಣ ಹಾಗೂ ಅಕ್ಕಮಹಾದೇವಿಯವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿರುವ ಕಿಡಿಗೇಡಿಯನ್ನು ಬಂಧಿಸುವಂತೆ ಎಸ್.ಮಹೇಶ್ ಆಗ್ರಹ

Mar 13, 2026 - 22:32
 0  107
ಬಸವಣ್ಣ ಹಾಗೂ ಅಕ್ಕಮಹಾದೇವಿಯವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿರುವ ಕಿಡಿಗೇಡಿಯನ್ನು ಬಂಧಿಸುವಂತೆ  ಎಸ್.ಮಹೇಶ್ ಆಗ್ರಹ
ಮಹೇಶ್

ಸೋಮವಾರಪೇಟೆ:- ಬಸವಣ್ಣ ಹಾಗೂ ಅಕ್ಕಮಹಾದೇವಿಯವರ ವಿರುದ್ಧ ಅವಹೇಳನಾಕಾರಿ ಪೋಸ್ಟ್ ಹಾಕಿರುವ ಕಿಡಿಗೇಡಿಯನ್ನು ಸರ್ಕಾರ ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ವೀರಶೈವ ಲಿಂಗಾಯತ ಸಂಘಟನಾವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಆಗ್ರಹಿಸಿದ್ದಾರೆ.

ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರು ಹಾಗೂ ನಾಡಿನ ಮೊದಲ ಮಹಿಳಾ ಕವಯತ್ರಿ ಅಕ್ಕಮಹಾದೇವಿಯವರು ಈ ಕನ್ನಡ ನಾಡಿನ ಹೆಮ್ಮೆ. ಇವರುಗಳು 12ನೆ ಶತಮಾನದಲ್ಲಿಯೇ ಸಮಾಜದಲ್ಲಿ ಸುಧಾರಣೆ ತರಲು ಪ್ರಯತ್ನಿಸುವುದರೊಂದಿಗೆ ಈ ರಾಷ್ಟ್ರಕ್ಕೆ ಪ್ರಜಾಪ್ರಭುತ್ವದ ಅಡಿಪಾಯ ಹಾಕಿಕೊಟ್ಟ ಮಹಾನಿಯರು ಅಂತಹವರ ಬಗ್ಗೆ ರಮಾಕಾಂತ್ ಎಂಬ ಕಿಡಿಗೇಡಿಯೊಬ್ಬ ಅಸಹ್ಯ ಹಾಗೂ ಆಕ್ಷೇಪಾರ್ಹ ಪದಗಳನ್ನು ಬಳಸಿ ಪೋಸ್ಟ್ ಹಾಕಿರುವುದು ನಾಗರೀಕ ಸಮಾಜ ಸಹಿಸಲು ಸಾಧ್ಯವಿಲ್ಲಾ ಎಂದು ಮಹೇಶ್ ಕೆಡಿಕಾರಿದ್ದಾರೆ, ಆದ್ದರಿಂದ ಸರ್ಕಾರ ಈ ಕಿಡಿಗೇಡಿಯನ್ನು ತಕ್ಷಣ ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0