Kodagu

ಕರವೇ ಕೊಡಗು ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿ ಸಾಗರ್ ತೊರೆನೂರು ಆಯ್ಕೆ

admincoorgdaily

ಮಡಿಕೇರಿ:ಟಿ.ಎ ನಾರಾಯಣ ಗೌಡ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆ ಕೊಡಗು ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿ ತೊರೆನೂರು ಗ್ರಾಮದ ಸಾಗರ್ ತೊರೆನೂರು ಅವರನ್ನು ವೇದಿಕೆಯ ರಾಜ್ಯ ಸಂಚಾಲಕಿ ದೀಪಾ ಪೂಜಾರಿ ನೇಮಕ ಮಾಡಿದ್ದಾರೆ. ವೇದಿಕೆ ವತಿಯಿಂದ ಕುಶಾಲನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆದೇಶ ಪ್ರತಿ ನೀಡಿ ಆಯ್ಕೆ ಮಾಡಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.