ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ; ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ

May 5, 2026 - 17:09
 0  365
ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ;  ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ

ವಿರಾಜಪೇಟೆ :- ವಿರಾಜಪೇಟೆ ತಾಲ್ಲೂಕಿನ ಪೆರುಂಬಾಡಿಯ ಶಂಸುಲ್ ಉಲಮಾ ಎಜುಕೇಶನಲ್ ಅಕಾಡೆಮಿಯ ಎಸ್ಇಎ ಕಾಲೇಜು ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಯಲ್ಲಿ ಪಾಲ್ಗೊಂಡು ಶೇ100/ರ ಫಲಿತಾಂಶದೊಂದಿಗೆ ರಾಜ್ಯದಲ್ಲಿ 12ನೇ ಸ್ಥಾನ, ಜಿಲ್ಲೆಗೆ ನಾಲ್ಕನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ ಗಳಿಸಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಗೌರವ ಸಮರ್ಪಣೆಯೊಂದಿಗೆ ಅಭಿನಂದನ ಕಾರ್ಯಕ್ರಮ ಅಕಾಡೆಮಿ ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಕೊಡವ ಮುಸ್ಲಿಂ ಅಸೋಸಿಯೇಷನ್ ಅಧ್ಯಕ್ಷ ದುದ್ದಿಯಂಡ ಎಚ್ ಸೂಫಿ ಹಾಜಿ ಅಭಿನಂದನ ಸಮಾರಂಭ ಉದ್ಘಾಟಿಸಿ ಮಾತನಾಡಿ ಮುಂದಿನ ಭವಿಷ್ಯದ ಬಗ್ಗೆ ಚಿಂತನೆ ಮಾಡುವುದರ ಮೂಲಕ ಶಿಕ್ಷಣ ಕಲಿಕೆಯೊಂದಿಗೆ ಉತ್ತಮ ಪ್ರಜೆಗಳಾಗಿ ಗುರುತಿಸಿಕೊಂಡು ಸಾಧಿಸುವ ಛಲದೊಂದಿಗೆ ಪ್ರತಿಭಾನ್ವಿತರಾಗಿ ಸಮಾಜದ ಮುಖ್ಯ ವಾಹಿನಿಗೆ ಬರಲು ಸಾಧ್ಯವಾಗಲಿದ್ದು ಪೋಷಕರು ಮಕ್ಕಳ ಶಿಕ್ಷಣದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಕಲಿಕೆಗೆ ಪ್ರೋತ್ಸಾಹ ನೀಡಬೇಕೆಂದು ಹೇಳಿದ ಅವರು ಸಂಶುಲ್ ಉಲಮ ಎಜುಕೇಶನಲ್ ಅಕಾಡೆಮಿ ಶಿಕ್ಷಣ ಸಂಸ್ಥೆ ಹೆಣ್ಣು ಮಕ್ಕಳ ಭವಿಷ್ಯದ ಬಗ್ಗೆ ಕಾಳಜಿ ವಹಿಸಿ ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಲು ಶ್ರಮಿಸುತ್ತಿದ್ದು ಹಲವು ವರ್ಷಗಳಿಂದಲೂ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಶೇಕಡ ನೂರರಷ್ಟು ಫಲಿತಾಂಶದೊಂದಿಗೆ ವಿದ್ಯಾರ್ಥಿಗಳು ಸಾಧನೆ ಮಾಡುತ್ತಿದ್ದಾರೆ.

 ಗ್ರಾಮೀಣ ಭಾಗದ ಕಡುಬಡ ವಿದ್ಯಾರ್ಥಿಗಳು ಶಾಲೆಯಲ್ಲಿ ಕಲಿಯುತ್ತಿದ್ದು ದಾನಿಗಳು ಹೆಚ್ಚಿನ ಸಹಕಾರ ನೀಡಬೇಕೆಂದು ಹೇಳಿದರು. ಸಂಸುಲ್ ಉಲಮ ಎಜುಕೇಶನಲ್ ಅಕಾಡೆಮಿ ಅಧ್ಯಕ್ಷ ಸಿಪಿಎಂ ಬಶೀರ್ ಹಾಜಿ ಮಾತನಾಡಿ ಪ್ರಾಥಮಿಕ ಶಿಕ್ಷಣದಿಂದ ಡಿಗ್ರಿ ಕಾಲೇಜ್ ಶಿಕ್ಷಣದವರೆಗೆ ಮುನ್ನಡೆಯುತ್ತಿದ್ದು ಶಿಕ್ಷಕರಗಳ ಪರಿಶ್ರಮದಿಂದ ವಿದ್ಯಾರ್ಥಿಗಳು ಕಲಿಕೆಯ ಮೂಲಕ ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಹೆಣ್ಣು ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಭವಿಷ್ಯ ರೂಪಿಸಲು ಮುಂದಾಗಿದ್ದು ಶಿಕ್ಷಣ, ಕ್ರೀಡೆ ಸೇರಿದಂತೆ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಜಿಲ್ಲೆ ರಾಜ್ಯಮಟ್ಟದಲ್ಲಿ ವಿದ್ಯಾರ್ಥಿಗಳು ಗುರುತಿಸಿಕೊಂಡು ಸಾಧನೆ ಮಾಡಿದ್ದಾರೆ ಉನ್ನತ ಶಿಕ್ಷಣ ಕಲಿತ ವಿದ್ಯಾರ್ಥಿಗಳಿಗೆ ಮುಂದಿನ ಭವಿಷ್ಯ ರೂಪಿಸಿಕೊಳ್ಳಲು ಉದ್ಯೋಗ ವ್ಯವಸ್ಥೆ ಸೇರಿದಂತೆ ಉನ್ನತ ಶಿಕ್ಷಣಕ್ಕೂ ಸಹಕಾರ ನೀಡಲಾಗುತ್ತಿದೆ. ಶಾಲಾ, ಕಾಲೇಜಿನಲ್ಲಿ ಅತ್ಯುನ್ನತ ಶಿಕ್ಷಣ ಕಲಿಕಾ ವ್ಯವಸ್ಥೆ ಇದ್ದು ಪೋಷಕರು ತಮ್ಮ ಮಕ್ಕಳ ಮುಂದಿನ ಭವಿಷ್ಯ ರೂಪಿಸಲು ಶಿಕ್ಷಣ ಕಲಿಕೆಗೆ ಪ್ರೋತ್ಸಾಹ ನೀಡಬೇಕೆಂದರು.

ಕಾಲೇಜಿನ ಪ್ರಾಂಶುಪಾಲರಾದ ಭಾನುಮತಿ ಮಾತನಾಡಿ ಎಸ್ಇಎ ಶಿಕ್ಷಣ ಸಂಸ್ಥೆಯಲ್ಲಿ ಕಲಿಕೆಗೆ ಪೂರಕವಾದ ಉತ್ತಮ ವಾತಾವರಣವಿದ್ದು ಕಾಲೇಜಿನಲ್ಲಿ ಕಲಿತ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳು ರಾಜ್ಯ, ಜಿಲ್ಲಾ, ತಾಲೂಕು ಮಟ್ಟದಲ್ಲೂ ಸಾಧನೆ ಮಾಡಿದ್ದಾರೆ ಮಕ್ಕಳ ಭವಿಷ್ಯವನ್ನು ರೂಪಿಸಲು ಶಿಕ್ಷಕರುಗಳು ಮುಂದಾಗಿದ್ದು ವಿದ್ಯಾರ್ಥಿಗಳನ್ನು ಶಾಲೆಗೆ ಸೇರಿಸಬೇಕೆಂದು ಮನವಿ ಮಾಡಿದರು.

ಸಮಾಜ ಸೇವಕ ಕುಂಡಂಡ ರಫೀಕ್ ಮಾತನಾಡಿ ಉನ್ನತ ಶಿಕ್ಷಣ ಕಲಿತ ವಿದ್ಯಾರ್ಥಿಗಳಿಗೆ ವಿದೇಶಗಳಲ್ಲೂ ಉದ್ಯೋಗಾವಕಾಶ ಕಲ್ಪಿಸಲು ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಹೇಳಿದ ಅವರು ಸಂಶುಲ್ ಉಲಮ ಎಜುಕೇಶನಲ್ ಅಕಾಡೆಮಿ ಶಿಕ್ಷಣ ಸಂಸ್ಥೆಯಲ್ಲಿ ಕಲಿತ ವಿದ್ಯಾರ್ಥಿಯರವರಿಗೆ ವಿದೇಶದಲ್ಲಿ ಉದ್ಯೋಗಾವಕಾಶ ಕಲ್ಪಿಸಿರುವದಾಗಿ ಹೇಳಿದ ಅವರು ಅನಾಥ ಬಡ ನಿರ್ಗತಿಕ ಹೆಣ್ಣು ಮಕ್ಕಳಿಗೂ ಉನ್ನತ ಶಿಕ್ಷಣ ನೀಡುವುದರೊಂದಿಗೆ ಉತ್ತಮ ಭವಿಷ್ಯ ರೂಪಿಸಲು ಮುಂದಾಗಿರುವ ಸಂಸ್ಥೆಯ ಸೇವಾ ಕಾರ್ಯದ ಬಗ್ಗೆ ಮೆಚ್ಚಿಗೆ ವ್ಯಕ್ತಪಡಿಸಿದರು.

ಇದೇ ಸಂದರ್ಭ ಸಾಧನೆ ಮಾಡಿದ ವಿದ್ಯಾರ್ಥಿಗಳು ಹಾಗೂ ವಿಶೇಷ ಸಾಧನೆ ಮಾಡಿದ ಗೋಣಿಕೊಪ್ಪಲುವಿನ ಅರುಣ್ ಕುಮಾರ್ ಅವರಿಗೆ ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಪ್ರಮುಖರಾದ ಎಡಪಲ ಬಸಿರ್ ಹಾಜಿ, ಮಹಮ್ಮದ್ ಮಣಿ ಮಾಸ್ಟರ್, ಅಬ್ದುಲ್ ರೆಹಮಾನ್ ಹಾಜಿ, ಮೊಹಮ್ಮದ್ ಅಲಿ, ಸಲ್ಮಾನ್ ಹಾಜಿ, ಇರ್ಫಾನ್, ಅಹಮದ್ ಸಮೀರ್ ,ಅಬ್ದುಲ್ ಖಾದರ್ ಹಾಜಿ, ರಿಯಾಜ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0