ಶನಿವಾರಸಂತೆ; ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸೀಮಂತ ಕಾರ್ಯಕ್ರಮ

Feb 20, 2026 - 23:08
 0  217
ಶನಿವಾರಸಂತೆ; ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸೀಮಂತ ಕಾರ್ಯಕ್ರಮ

ಶನಿವಾರಸಂತೆ ಫೆ.20 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಸೋಮವಾರಪೇಟೆ ತಾಲ್ಲೂಕು ಹಾಗೂ ದುಂಡಳ್ಳಿ ಪಂಚಾಯತಿ ವ್ಯಾಪ್ತಿಯ ಅಂಗನವಾಡಿಗಳ ಸಂಯುಕ್ತಾಶ್ರಯದಲ್ಲಿ ದುಂಡಳ್ಳಿ ಸಂಜೀವಿನಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಪೋಷಣಾ ಅಭಿಯಾನ ಹಾಗೂ ಸೀಮಂತ ಅಕ್ಷರ ಅಭ್ಯಾಸ, ಅನ್ನ ಪ್ರಸನ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು.

 ದುಂಡಳ್ಳಿ ಸಂಜೀವಿನಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಬಾಲವಿಕಾಸ ಸಮಿತಿ ಅಧ್ಯಕ್ಷೆ ಗುಣವತಿ ಉದ್ಘಾಟಿಸಿ ಮಾತನಾಡಿ,ತಾಯ್ತನ ಹೆಣ್ಣಿಗೊಲಿದ ಒಂದು ಅದೃಷ್ಟ. ಈ ಅದೃಷ್ಟವನ್ನು ಸಂಭ್ರಮಿಸುವುದೇ ಸೀಮಂತ ಕಾರ್ಯ, ಸೀಮಂತವೆಂದರೆ ಕೇವಲ ಸಂಭ್ರಮಾಚರಣೆಯಲ್ಲ.ಇದೊಂದು ಸಂಸ್ಕಾರ, ಗರ್ಭವತಿಯಾದ ಹೆಣ್ಣುಮಗಳು ಮತ್ತು ಆಕೆಯ ಕರುಳ ಕುಡಿಗೆ ಸರ್ವವೂ ಶುಭವಾಗಲಿ ಎಂದು ಹರಸುವ ಸಂಪ್ರದಾಯಬದ್ಧ ಶಾಸ್ತ್ರವಾಗಿದೆ ಎಂದು ಹೇಳಿದರು.

 ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹಿರಿಯ ಅರೋಗ್ಯ ಅಧಿಕಾರಿ ಸರಸ್ವತಿ ಮಾತನಾಡಿ,ಮಹಿಳೆಯರು ಗರ್ಭಧರಿಸಿದ ಮೊದಲ ತಿಂಗಳಲ್ಲಿಯೇ ಆಶಾ ಕಾರ್ಯಕರ್ತೆ ಹಾಗೂ ಅಂಗನವಾಡಿ ಕಾರ್ಯಕರ್ತರ ಮೂಲಕ ತಾಯಿ ಕಾರ್ಡ್ ಮಾಡಿಸಿ ಪ್ರತಿ ತಿಂಗಳು ವೈದ್ಯರ ಸಲಹೆ ಪಡೆದು ತಮ್ಮ ಆರೋಗ್ಯ ಸುಧಾರಣೆಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.

 ಆಶಾ ಕಾರ್ಯಕರ್ತೆ ಉಷಾ ಜಯೇಶ್ ಮಾತನಾಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸಿಬಿಇ ಎಂಬ ಕಾರ್ಯಕ್ರಮ ಅಡಿಯಲ್ಲಿ ಸೀಮಂತ,ಅಕ್ಷರಾಭ್ಯಾಸ, ಅನ್ನ ಪ್ರಸನವನ್ನು ಗರ್ಭಿಣಿಯರು ಹಾಗೂ ಮಕ್ಕಳಿಗೆ ಏರ್ಪಡಿಸಲಾಗಿದ್ದು,ಈ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಜೊತೆಗೆ ಅಂಗನವಾಡಿ ಕೇಂದ್ರದಿಂದ ಗರ್ಭಿಣಿ ಮಹಿಳೆಯರಿಗೆ ಪೌಷ್ಟಿಕಾಹಾರ ಗಳನ್ನು ವಿತರಣೆ ಮಾಡಲಾಗುತ್ತಿದೆ. ಮಹಿಳೆಯರು ಉತ್ತಮ ಗುಣಮಟ್ಟದ ಪೌಷ್ಟಿಕಾಂಶವುಳ್ಳ ಆಹಾರವನ್ನು ಸೇವಿಸುವ ಮೂಲಕ ಮಗುವಿನ ಆರೋಗ್ಯದ ಜೊತೆಗೆ ನಿಮ್ಮ ಆರೋಗ್ಯದ ಸುಧಾರಣೆಗೂ ಒತ್ತು ನೀಡಬೇಕು ಎಂದರು‌.

ಅಂಗನವಾಡಿ ಕಾರ್ಯಕರ್ತೆ ಅಶ್ವಿನಿ,ಬಾನುಮತಿ, ಫಾತಿಮಾ ಹಾಗೂ ಸುತ್ತಮುತ್ತಲಿನ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಹಿರಿಯರಾದ ಗುಣವತಿ ಹಾಸೆನಾರ್, ಯಶೋಧ ಹಾಗೂ ಈ ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು. ನಂತರ ಗರ್ಭಿಣಿ ಮಹಿಳೆಯರಿಗೆ ಸೀಮಂತ ಶಾಸ್ತ್ರ ನೆರವೇರಿಸಲಾಯಿತು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0