ಶಿವಮೊಗ್ಗ:ಸ್ನೇಹಿತನನ್ನು ಬಚಾವ್ ಮಾಡಲು ಹೋದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಯ ಕೊಲೆ

Feb 25, 2026 - 00:59
Feb 25, 2026 - 01:00
 0  1.7k
ಶಿವಮೊಗ್ಗ:ಸ್ನೇಹಿತನನ್ನು ಬಚಾವ್ ಮಾಡಲು ಹೋದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಯ ಕೊಲೆ
ಸಂಕೇತ್

ಶಿವಮೊಗ್ಗ, ಫೆ 24: ಶಿವಮೊಗ್ಗದ ಹೊರವಲಯದ ಸೂಳೆಬೈಲು ಸರಕಾರಿ ಪ್ರೌಢಶಾಲೆಯಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆಯ ಹಿನ್ನಲೆಯಲ್ಲಿ ವಿದ್ಯಾರ್ಥಿಗಳಿಗೆ ಸ್ಪೇಶಲ್ ಕ್ಲಾಸ್ ತೆಗೆದುಕೊಳ್ಳಲಾಗುತ್ತಿತ್ತು.

ಇದೇ ಸೂಳೆಬೈಲು ಬಡಾವಣೆಯ ಸಂಕೇತ್ ಕ್ಲಾಸ್ ಮುಗಿಸಿಕೊಂಡು ವಾಪಸ್ ಮನೆಯತ್ತ ಹೋಗುವಾಗ ಸ್ನೇಹಿತ ಗಿರೀಶ್ ಮೇಲೆ ಅದೇ ಬಡಾವಣೆಯ ಐವರು ಬಾಲಕರು ಏಕಾಏಕಿ ಹಲ್ಲೆ ಮಾಡುತ್ತಿದ್ದರು. ಈ ನಡುವೆ ಗಿರೀಶ್​ನನ್ನು ಬಚಾವ್ ಮಾಡಲು ಅಲ್ಲಿಗೆ ಸಂಕೇತ್ ಹೋಗಿದ್ದಾನೆ. ಆ ಐವರು ಬಾಲಕರು ಸಂಕೇತ್ ಮೇಲೆ ಹಲ್ಲೆ ಮಾಡಿದ್ದಾರೆ. ಇದರಿಂದ ಸಂಕೇತ್ ಅಲ್ಲಿಯೇ ಕುಸಿದು ಬಿದ್ದಿದ್ದಾನೆ.

ಗಿರೀಶ್ ತನ್ನ ಮನೆಯವರಿಗೆ ಮತ್ತು ಅಕ್ಕಪಕ್ಕದವರಿಗೆ ಗಲಾಟೆ ಬಗ್ಗೆ ಮಾಹಿತಿ ಕೊಟ್ಟಿದ್ದಾನೆ. ಇದರಿಂದ ಅಕ್ಕಪಕ್ಕದವರು ಅಲ್ಲಿಗೆ ಹೋಗಿ ನೋಡಿದಾಗ ಹಲ್ಲೆಗೊಳಗಾದ ಸಂಕೇತ್ ಸ್ಥಿತಿ ಗಂಭೀರವಾಗಿತ್ತು. ಕೂಡಲೇ ಆತನನ್ನು ಖಾಸಗಿ ಆಸ್ಪತ್ರೆಗೆ ಕೆರೆದುಕೊಂಡು ಹೋದರು.

ಆದರೆ ಮಾರ್ಗ ಮಧ್ಯೆಯೇ ಆತನ ಪ್ರಾಣಪಕ್ಷಿ ಹಾರಿಹೋಗಿತ್ತು. ಘಟನೆ ಬಗ್ಗೆ ತಿಳಿಯುತ್ತಿದ್ದಂತೆಯೇ ಇರುವ ಒಬ್ಬ ಮಗನನ್ನು ಕಳೆದುಕೊಂಡ ಹೆತ್ತವರು ಆಘಾತಕ್ಕೊಳಗಾಗಿದ್ದಾರೆ. ಮಗನ ಸಾವಿನ ಸುದ್ದಿಯಿಂದ ಇಡೀ ಕುಟುಂಬಸ್ಥರು ದೊಡ್ಡ ಆಘಾತಗೊಳಗಾಗಿದ್ದಾರೆ. ಅವರ ಅಕ್ರಂದನ ಮುಗಿಲು ಮುಟ್ಟಿದೆ.

ಸೋಮವಾರ ಸಂಜೆ ಸೂಳೆಬೈಲಿನಲ್ಲಿ ನಡೆದಿದ್ದೇನು? ಸೂಳೆಬೈಲು ಸರಕಾರಿ ಪ್ರೌಢಶಾಲೆಯಲ್ಲಿ ಎಸ್​ಎಸ್​ಎಲ್​ಸಿ ಮಕ್ಕಳಿಗೆ ಪರೀಕ್ಷೆ ಹಿನ್ನಲೆಯಲ್ಲಿ ಸ್ಪೆಷಲ್ ಕ್ಲಾಸ್ ಇತ್ತು. ಕ್ಲಾಸ್ ಮುಗಿಸಿಕೊಂಡು ಹೋಗುವಾಗ ಅದೇ ಬಡಾವಣೆಯ ಮೂವರು ಬಾಲಕರು ಕಿರಿಕ್ ಮಾಡಿದ್ದಾರೆ.

ಈ ನಡುವೆ ಬಾಲಕರ ನಡುವೆ ಗಲಾಟೆಯಾಗಿದೆ. ಅನ್ಯಕೋಮಿನ ಬಾಲಕರು ಮೊದಲು ಗಿರೀಶ್ ಹಾಗೂ ನಂತರ ಸಂಕೇತ್ ಮೇಲೆ ಹಲ್ಲೆ ಮಾಡಿದ್ದಾರೆ. ಬಳಿಕ ಸಂಕೇತ್ ಕುಸಿದು ಬೀಳುತ್ತಿದ್ದಂತೆಯೇ ಮೂವರು ಬಾಲಕರು ಅಲ್ಲಿಂದ ಕಾಲ್ಕಿತ್ತಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ತುಂಗಾ ನಗರ ಪೊಲೀಸರು ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಹಲ್ಲೆ ಮಾಡಿ ಕೊಲೆಗೆ ಕಾರಣವಾದ ಇಬ್ಬರು ಬಾಲಕರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಘಟನೆ ಕುರಿತು ತನಿಖೆಯು ಚುರುಕುಗೊಂಡಿದೆ. ಗಿರೀಶ್ ಮತ್ತು ಸಂಕೇತ್ ನಡುವೆ ಇತ್ತು ಉತ್ತಮ ಸ್ನೇಹ ಗಿರೀಶ್ ಮತ್ತು ಮೃತ ಸಂಕೇತ್ ಅತ್ಯುತ್ತಮ ಸ್ನೇಹಿತರಾಗಿದ್ದರು. ಈ ಹಿನ್ನಲೆಯಲ್ಲಿ ಗಿರೀಶ್ ಮೇಲೆ ಅನ್ಯಕೋಮಿನ ಬಾಲಕರು ಹಲ್ಲೆ ಮಾಡುವ ಸಂದರ್ಭದಲ್ಲಿ ಸ್ನೇಹಿತನ ಬಚಾವ್ ಮಾಡಲು ಸಂಕೇತ್ ಎಂಟ್ರಿಕೊಟ್ಟಿದ್ದ.

ಗಿರೀಶ್​​ನನ್ನು ಬಚಾವ್ ಮಾಡುವ ಸಂದರ್ಭದಲ್ಲಿ ಬಾಲಕರು ಗಿರೀಶ್​​ನನ್ನು ಬಿಟ್ಟು ಸಂಕೇತ್ ಮೇಲೆ ಹಲ್ಲೆ ಮಾಡಿದ್ದಾರೆ. ಎದೆ, ಮುಖ, ಹೊಟ್ಟೆ ಮೇಲೆ ಹೊಡೆದಿದ್ದಾರೆ. ಇದರಿಂದ ಸಂಕೇತ್ ಅಸ್ವಸ್ಥಗೊಂಡು ಅಲ್ಲಿಯೇ ಕುಸಿದು ಬಿದ್ದಿದ್ದಾನೆ. ಆಸ್ಪತ್ರೆಗೆ ದಾಖಲಿಸುವ ಮೊದಲೇ ಅಸುನೀಗಿದ್ದಾನೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 13
Wow Wow 0