ಸಿದ್ದಾಪುರ: ಭಾರಿ ಮಳೆಗೆ ಕರಡಿಗೋಡು ಸಂಪರ್ಕ ರಸ್ತೆ ಕಡಿತ
ಸಿದ್ದಾಪುರ: ವಿರಾಜಪೇಟೆ ತಾಲ್ಲೂಕು ಅಮ್ಮತಿ ಹೋಬಳಿ ಕರಡಿಗೋಡು ಕಾವೇರಿ ನದಿ ಪಾತ್ರದಲ್ಲಿರುವ ಹೊಳೆಕೆಯಲ್ಲಿ ಭಾರಿ ಮಳೆಯಿಂದಾಗಿ ಕರಡಿಗೋಡು-ಚಿಕ್ಕನಳ್ಳಿ ಸಂಪರ್ಕ ರಸ್ತೆ ಕಡಿತಗೊಂಡಿದೆ.
ಘಟನಾ ಸ್ಥಳಕ್ಕೆ ನೋಡಲ್ ಅಧಿಕಾರಿಗಳು, ಕಂದಾಯ ನಿರೀಕ್ಷಕರು ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಸ್ತೆ ಕಡಿತಗೊಂಡ ಹಿನ್ನೆಲೆ ಸಾರ್ವಜನಿಕರು ಸಂಚರಿಸದಂತೆ ಬ್ಯಾರಿಕೆಡ್ ಅಳವಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
1
Wow
0

