ಸೋಮವಾರಪೇಟೆ: ಕಾಫಿ ಬೆಳೆಗಾರ ಹಾಗೂ ಉದ್ಯಮಿ ಬಿ.ಎಸ್ ನಿರ್ವಾಣಿ ನಿಧನ
ಸೋಮವಾರಪೇಟೆ ಮಹದೇಶ್ವರ ಬ್ಲಾಕ್ ನಿವಾಸಿ ಕಾಫಿ ಬೆಳೆಗಾರ ಹಾಗೂ ಪಟ್ಟಣದ ರಾಘವೇಂದ್ರ ಪ್ರಾವಿಷನ್ ಸ್ಟೋರ್ ಮಾಲೀಕ ಬಿ.ಎಸ್.ನಿರ್ವಾಣಿ (83) ಇಂದು(ಬುಧವಾರ) ಮುಂಜಾನೆ ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಸಂಜೆ 3ಗಂಟೆಗೆ ಕರ್ಕಳ್ಳಿಯಲ್ಲಿರುವ ಕುರುಹಿನಶೆಟ್ಟಿ ರುದ್ರಭೂಮಿಯಲ್ಲಿ ನಡೆಯಲಿದೆ. ಮೃತರು ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷೆ ಲೀಲಾ ನಿರ್ವಾಣಿ ಸೇರಿದಂತೆ ಮೂವರು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.