ಸೋಮವಾರಪೇಟೆ; ಬೇಳೂರು ಸರ್ಕಾರಿ ಶಾಲೆಯಲ್ಲಿ ರೋಟರಿ ಕ್ಲಬ್ ವತಿಯಿಂದ ವನಮೊಹೋತ್ಸವ
ಸೋಮವಾರಪೇಟೆ: ರೋಟರಿ ಕ್ಲಬ್ ವತಿಯಿಂದ ವನಮಹೋತ್ಸವ ಅಂಗವಾಗಿ ಬೇಳೂರು ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಮಂಗಳವಾರ ಗಿಡ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಬಗ್ಗೆ ಜನಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ರೋಟರಿ ಅಧ್ಯಕ್ಷ ಬಿ.ಎಸ್. ಸುಂದರ್, ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ರೋಟರಿ ಕಾರ್ಯದರ್ಶಿ ಪಿ.ಕೆ. ರವಿ, ವಲಯ ಸೇನಾನಿ ಎ.ಎಸ್. ಮಲ್ಲೇಶ್, ಬೇಳೂರು ಶಾಲೆ ಎಸ್ಡಿಎಂಸಿ ಸದಸ್ಯರ ಉಲ್ಲಾಸ್, ಆನಂದ್ ಇದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
