ಬೆಟ್ಟತ್ತೂರಿನಲ್ಲಿ‌ ಕಾಡಾನೆ ದಾಳಿಗೆ ವಿದ್ಯಾರ್ಥಿ ಬಲಿ:ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಸಂಸದ ಯದುವೀರ್ ಒಡೆಯರ್

ಬೆಟ್ಟತ್ತೂರಿನಲ್ಲಿ‌ ಕಾಡಾನೆ ದಾಳಿಗೆ ವಿದ್ಯಾರ್ಥಿ ಬಲಿ:ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಸಂಸದ ಯದುವೀರ್ ಒಡೆಯರ್

ಮಡಿಕೇರಿ;ಬೆಟ್ಟತ್ತೂರು ಗ್ರಾಮದಲ್ಲಿ ಶನಿವಾರ ನಡೆದ ಕಾಡಾನೆ ದಾಳಿಗೆ ಮೃತಪಟ್ಟ ವಿದ್ಯಾರ್ಥಿನಿ ಪೂಜಾ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡು ಮೃತ ವಿದ್ಯಾರ್ಥಿನಿಯ ಕುಟುಂಬದವರಿಗೆ ಸಂಸದ ಯದುವೀರ್ ಒಡೆಯರ್ ಅವರು ಸಾಂತ್ವನ ಹೇಳಿ ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಅಪ್ಪಚ್ಚು ರಂಜನ್,ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ‌ ರವಿ ಕಾಳಪ್ಪ ಮತ್ತಿತರರು ಇದ್ದರು.