ರಾಜ್ಯ ಸರ್ಕಾರ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಕೈ ಬಿಡಬೇಕು:ಎಸ್.ಎನ್.ಡಿ.ಪಿ ಜಿಲ್ಲಾಧ್ಯಕ್ಷ ವಿ.ಕೆ ಲೋಕೇಶ್ ಒತ್ತಾಯ

ಸಿದ್ದಾಪುರ;ಸೆಪ್ಟಂಬರ್ 22 ರಿಂದ ಅಕ್ಟೋಬರ್ 7ರವರೆಗೆ ರಾಜ್ಯ ಸರ್ಕಾರವು ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸುತ್ತಿದ್ದು ಈ ಸಮೀಕ್ಷೆಯಲ್ಲಿ ಹಲವಾರು ನ್ಯೂನತೆಗಳಿದ್ದು ಈ ನೂನ್ಯತೆಗಳನ್ನು ಸರಿಪಡಿಸಬೇಕೆಂದು ಜಿಲ್ಲಾ ಎಸ್. ಎನ್. ಡಿ.ಪಿ.ಯೂನಿಯನ್ನ ಜಿಲ್ಲಾಧ್ಯಕ್ಷ ವಿ.ಕೆ. ಲೋಕೇಶ್ ಒತ್ತಾಯಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು ಪ್ರಸ್ತುತ ಇರುವ ಜಾತಿ ಕಾಲಂಮ್ ನಲ್ಲಿ ಮಲಯಾಳಿ, ಬಿಲ್ಲವ ಎಂಬ ಜಾತಿ ಇದ್ದು ಈ ರೀತಿ ಜಾತಿ ಇರುವುದಿಲ್ಲ ಎಂದು ತಿಳಿಸಿದ ಅವರು ನಮ್ಮ ಜನಾನಂಗದವರು ತೀಯಾನ್ (ezhava) ಎಂದು ನಮೂದಿಸಬೇಕೆಂದು ಮನವಿ ಮಾಡಿದ್ದಾರೆ.
ರಾಜ್ಯ ಸರ್ಕಾರವು ಈಗಿರುವ ಕ್ರೈಸ್ತ ಧರ್ಮ ದ ಎದುರು 46 ಹಿಂದೂ ಜಾತಿಗಳ ಹೆಸರುಗಳನ್ನು ನಮೂದಿಸಿರುವುದು ಮುಂದಿನ ದಿನಗಳಲ್ಲಿ ಸರ್ಕಾರವೇ ಮತಾಂತರಕ್ಕೆ ಪ್ರಚೋದನೆ ಕೊಟ್ಟಂತಾಗುತ್ತದೆ ಎಂದು ಆರೋಪಿಸಿದರು.ಈ ಹಿನ್ನೆಲೆಯಲ್ಲಿ ಸರ್ಕಾರವು ಇದೀಗ ಕೈಗೊಂಡಿರುವ ಸಮೀಕ್ಷೆಯನ್ನು ಕೈಬಿಡಬೇಕೆಂದು ಲೋಕೇಶ್ ಮನವಿ ಮಾಡಿಕೊಂಡಿದ್ದಾರೆ. ಸಮಾಜ ಬಾಂಧವರು ಜಾತಿ ಯ ಕಾಲಂನಲ್ಲಿ ತೀಯನ್ ಮತ್ತು ಧರ್ಮದ ಕಾಲಂನಲ್ಲಿ ಹಿಂದೂ ಧರ್ಮ ಎಂದು ನಮೂದಿಸಬೇಕೆಂದು ಮನವಿ ಮಾಡಿದ್ದಾರೆ.