ಕೆ.ಪಿ.ಸಿ.ಸಿ ಸೂಚನೆ ಮೇರೆಗೆ ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ತೆನ್ನಿರ ಮೈನಾ ನೇಮಕ

ಕೆ.ಪಿ.ಸಿ.ಸಿ ಸೂಚನೆ ಮೇರೆಗೆ ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ತೆನ್ನಿರ ಮೈನಾ ನೇಮಕ

ಮಡಿಕೇರಿ:ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಹಾಗೂ ಕರ್ನಾಟಕ ಸರ್ಕಾರದ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರ ಸೂಚನೆ ಮೇರೆಗೆ ತೆನ್ನಿರ ಮೈನಾ ರವರನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾರ ರನ್ನಾಗಿ ನೇಮಕ ಮಾಡಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷರಾದ ರಮೇಶ್ ಬಾಬು ರವರು ನೇಮಕಾತಿ ಆದೇಶ ಹೊರಡಿಸಿದ್ದಾರೆ.

ದಿನಾಂಕ 1-1-2026 ರಿಂದ ಜಾರಿಗೆ ಬರುವಂತೆ ಹೊರಡಿಸಿರುವ ನೇಮಕಾತಿ ಆದೇಶದಲ್ಲಿ ಕಾಂಗ್ರೆಸ್ ಪಕ್ಷದ ಸಿದ್ದಾಂತಗಳಿಗೆ ಅನುಗುಣವಾಗಿ ಪಕ್ಷದ ವಕ್ತಾರರಾಗಿ ಜವಾಬ್ದಾರಿಯನ್ನು ನಿರ್ವಹಿಸಲು ಹಾಗೂ ಪಕ್ಷದ ಸೂಚನೆಗಳಿಗೆ ಅನುಗುಣವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲುರಮೇಶ್ ಬಾಬು ರವರು ಕೋರಿದ್ದಾರೆ.