ಕೊಟ್ಟಿಯೂರಿಗೆ ತೆರಳುತ್ತಿದ್ದ ಪ್ರವಾಸಿ ಟಿ.ಟಿ. ವಾಹನ ನಿಯಂತ್ರಣ ತಪ್ಪಿ ಪಲ್ಟಿ

ಕೊಟ್ಟಿಯೂರಿಗೆ ತೆರಳುತ್ತಿದ್ದ ಪ್ರವಾಸಿ ಟಿ.ಟಿ. ವಾಹನ ನಿಯಂತ್ರಣ ತಪ್ಪಿ ಪಲ್ಟಿ

ಮಡಿಕೇರಿ;ಬೆಂಗಳೂರಿನಿಂದ ಕೇರಳದ ಕೊಟ್ಟಿಯೂರಿಗೆ ತೆರಳುತ್ತಿದ್ದ ಪ್ರವಾಸಿ ಟಿ.ಟಿ. ವಾಹನ ತಡರಾತ್ರಿ ಚಾಲಕನ ನಿಯಂತ್ರಣ ಕಳೆದುಕೊಂಡು ಅತ್ತೂರು ವನಭದ್ರ ಕಾಳಿ ದೇವಸ್ಥಾನದಿಂದ ಮುಂದಕ್ಕೆ ಕೊಳತ್ತೋಡು ಬಳಿ ಅಪಘಾತಕ್ಕೀಡಾಗಿ ಮಗುಚಿಕೊಂಡಿದ್ದು, ಇಂದು ಕ್ರೇನ್ ಸಹಾಯದಿಂದ ಮೇಲಕ್ಕೆ ಎತ್ತಲಾಯಿತು. ಅದೃಷ್ಟವಶಾತ್ ವಾಹನದಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.