ಕುಶಾಲನಗರ :ರಸ್ತೆಯಲ್ಲಿ ವಿರುದ್ಧ ದಿಕ್ಕಿಗೆ ವಾಹನಗಳ ಸಂಚಾರ: ಆಟೋ ರಿಕ್ಷಾ ಮತ್ತು ಸ್ಕೂಟಿ ನಡುವೆ ಅಪಘಾತ
ಕುಶಾಲನಗರ ಆ.9 : ಕುಶಾಲನಗರದ ಸೋಮೇಶ್ವರ ದೇವಾಲಯ ಎದುರಿನ ರಾಜ್ಯ ಹೆದ್ದಾರಿಯ ವಿಭಜಕದಲ್ಲಿ ವಿರುದ್ಧ ದಿಕ್ಕಿನಲ್ಲಿ ವಾಹನಗಳು ಅತಿ ವೇಗ ಹಾಗೂ ಕೆಲವರು ಆಜಾಗರೂಕತೆಯಿಂದ ವಾಹನ ಚಲಾಯಿಸುತ್ತಿರುವುದು ಕಂಡುಬಂದಿದೆ.
ಇದಕ್ಕೆ ಪೂರಕವೆಂಬಂತೆ ಶನಿವಾರ ಸಂಜೆ 7 ಗಂಟೆಗೆ ವಿರುದ್ಧ ದಿಕ್ಕಿನಲ್ಲಿ ಬಂದ ಆಟೋರಿಕ್ಷಾವೊಂದು ಸ್ಕೂಟಿಗೆ ಡಿಕ್ಕಿಯಾಗಿ ಅದೃಷ್ಟವಶಾತ್ ಹೆಚ್ಚಿನ ಅನಾಹುತ ಸಂಭವಿಸಿರುವುದಿಲ್ಲ. ಆಟೋರಿಕ್ಷಾವನ್ನು ರಸ್ತೆಯ ಕೆಳಬದಿ ಇಳಿಸಲು ಪಾದಚಾರಿ ಮಾರ್ಗದಲ್ಲಿ ಹಾಕಲಾಗಿದ್ದ ವಸ್ತುಗಳ ಅಡಚಣೆಯಿಂದ ಅಪಘಾತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಈ ಬಗ್ಗೆ ಪುರಸಭೆಯವರು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
