ಶನಿವಾರಸಂತೆ ನೂತನ ಬಸ್ಸು ತಂಗುದಾಣ ಉದ್ಘಾಟನೆಗೆ ಸಾರಿಗೆ ಸಚಿವರಿಗೆ ಆಹ್ವಾನ
ಬೆಂಗಳೂರು:ಫೆ.7ರಂದು ಉದ್ಘಾಟನೆಗೆ ಸಜ್ಜಾಗಿರುವ ಶನಿವಾರಸಂತೆಯ ನೂತನ ಬಸ್ ನಿಲ್ದಾಣ ಉದ್ಘಾಟನಾ ಸಮಾರಂಭಕ್ಕೆ ಶಾಸಕ ಡಾ.ಮಂತರ್ ಗೌಡ ರವರ ನೇತೃತ್ವದಲ್ಲಿ ಶನಿವಾರಸಂತೆ ಗ್ರಾಮ ಪಂಚಾಯಿತಿ ಆಡಳಿತ ಸಮಿತಿ ಹಾಗೂ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು ಕರ್ನಾಟಕ ರಾಜ್ಯ ಸರ್ಕಾರದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್ ಎಸ್ ಭೋಸರಾಜು ರವರನ್ನು ಭೇಟಿ ಮಾಡಿ ಆಹ್ವಾನ ನೀಡಿದರು.